ವಿಧ್ಯುತ್ತ ಸಂಪರ್ಕ ಕಲ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡಿ : ಹೆಸ್ಕಾಂ ಅಧ್ಯಕ್ಷ ಖಾದ್ರಿ
Provide electricity connectivity to farmers: HESCOM President Qadri
ಶಿಗ್ಗಾವಿ 14 : ಹೆಸ್ಕಾಂ ವ್ಯಾಪ್ತಿಯಲ್ಲಿ ಬರುವ 7 ಜಿಲ್ಲೆಗಳ ಎಲ್ಲ ಅಧಿಕಾರಿಗಳಿಗೆ ಬೇಸಿಗೆ ಸಂದರ್ಭದಲ್ಲಿ 7 ತಾಸು ವಿಧ್ಯುತ್ತ ಸಂಪರ್ಕ ಕಲ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಶಿಗ್ಗಾವಿ ತಾಲೂಕ ಹೆಸ್ಕಾಂ ಅಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು ಲೈನ್ ಮನಗಳು ಕಾರ್ಯಪ್ರವೃತ್ತರಾದಾಗ ಸೆಪ್ಟಿ ಕಿಟ್ಟ್ ಹಾಕಿ ಕಾರ್ಯನಿರ್ವಹಿಸಬೇಕು, ಅಲ್ಲದೇ ಗ್ರಾಹಕರ ಪೋನ ಬಂದಾಗ ರೀಸೀವ ಮಾಡಬೇಕು ಇಲ್ಲದಿದ್ದರೆ ನನಗೆ ಪೋನ ಬರುತ್ತವೆ ಹಾಗೂ ಎಲ್ಲ ಗ್ರಾಹಕರು ಹಳೆ ಬಿಲ್ಲ ಪಾವತಿಯನ್ನು ಮಾಡಿದಾಗ ಹೆಸ್ಕಾಂ ಇಲಾಖೆಗೆ ಶಕ್ತಿ ಬರುತ್ತದೆ.ಹೆಸ್ಕಾಂ ರೈತರ ಅಹವಾಲನ್ನು ಸ್ವೀಕರಿಸಿ ಅವರ ನ್ಯೂನತೆಗಳನ್ನು ಸರಿಪಡಿಸಬೇಕು ಹಾಗೂ ಅಧಿಕಾರಿಗಳು ಹಾಗೂ ಲೈನ್ ಮನಗಳು ಹಣದ ನೀರೀಕ್ಷೆಯನ್ನು ಮಾಡಿದರೆ ಶಿಸ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಎ.ಇ.ಇ ಹಾಗೂ ಲೈನ್ ಮನಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 