ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಮಾಹಿತಿ ನೀಡಿ: ಬಿ.ಸಿ.ಪಾಟೀಲ್
ಹಾವೇರಿ, ಏ 17, ಮನೆಯ ಬಾಗಿಲಿಗೆ ಬರುವ ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸಬೇಕು ಇದು ಜನರ ಕರ್ತವ್ಯ ವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡಾ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಉಚಿತ ಮಾಸ್ಕ್ ಗಳನ್ನು ವಿತರಿಸಿ ಅವರು ಮಾತನಾಡಿದರು. ಆಶಾಕಾರ್ಯಕರ್ತೆಯರು ಕೊರೊನಾ ವಾರಿಯರ್ಸ್ನಂತೆ ದುಡಿಯುತ್ತಿದ್ದು, ಮನೆಮನೆಗೆ ಹೋಗಿ ಜನರ ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ.ವಿವರ ಕೇಳಲು ಬರುವ ಆಶಾಕಾರ್ಯಕರ್ತೆಯರಿಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದರು .
ಗ್ರಾಮಪಂಚಾಯಿತಿ ಕಡೆಯಿಂದ ಆಶಾಕಾರ್ಯಕರ್ತೆಯರಿಗೆ ಥರ್ಮೋಮೀಟರ್ ಒದಗಿಸಿದಲ್ಲಿ ಜನರ ಆರೋಗ್ಯ ತಪಾಸಣೆಗೆ ಸಹಕಾರವಾಗಲಿದೆ ಎಂದರು.ಜನರು ಯಾವುದೇ ಕಾರಣಕ್ಕೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು.ಲಾಕ್ಡೌನ್ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆರೋಗ್ಯ ಮಾರ್ಗ ಸೂಚಿ ನಿಯಮಗಳನ್ನು ಉಲ್ಲಂಘಿಸಬಾರದು.ಯಾರಿಗಾದರೂ ಅನಾರೋಗ್ಯದ ಲಕ್ಷಣ ಕಂಡುಬಂದಲ್ಲಿ ಅದನ್ನು ತಕ್ಷಣವೇ ತಾಲೂಕು ವೈದ್ಯಾಧಿಕಾರಿ ಹಾಗೂ ತಾಲೂಕು ಆಡಳಿತದ ಗಮನಕ್ಕೆ ತರಬೇಕು ಎಂದೂ ಸಚಿವರು ಸಲಹೆ ನೀಡಿದರು. ಬಳಿಕ ಹಿರೇಕೆರೂರಿನ ವ್ಯವಸಾಯೋತ್ಪನ್ನ ಸಹಕಾರಿ ಮಾರಾಟ ಸಂಘಕ್ಕೂ ಭೇಟಿ ನೀಡಿದ ಸಚಿವರು, ಮುಂಗಾರು ಬಿತ್ತನೆಗೆ ರೈತರಿಗೆ ಅಗತ್ಯವಾದ ಗೊಬ್ಬರ,ಬೀಜದ ದಾಸ್ತಾನು ಪರಿಶೀಲಿಸಿದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 