ಸೊಳ್ಳೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾ ಕೀಟಶಾಸ್ತ್ರಜ್ಞೆ ನಂದಿನಿ
Public cooperation essential for mosquito control: District Entomologist Nandini
ಬಳ್ಳಾರಿ 20: ಸಮುದಾಯಗಳಲ್ಲಿ ಸೊಳ್ಳೆ ನಿಯಂತ್ರಣ ಹಾಗೂ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದು ಜಿಲ್ಲಾ ಕೀಟಶಾಸ್ತ್ರಜ್ಞೆ ನಂದಿನಿ ಹೇಳಿದರು.
ಡೆಂಗ್ಯೂ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬಂಡಿಹಟ್ಟಿ ಸರ್ಕಾರಿ ಹಾಸ್ಟೆಲ್ನಲ್ಲಿ ಶುಕ್ರವಾರ ಶಾಲಾ ಮಕ್ಕಳಿಗಾಗಿ ಆಯೋಜಿಸಿದ್ದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಡೆಂಗ್ಯೂ ರೋಗವು ಈಡಿಸ್ ಈಜಿಪ್ಟೈ ಎಂಬ ಸೋಂಕಿತ ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ.
ಮಳೆಗಾಲದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮನೆಗಳ ಒಳಗೆ ಹಾಗೂ ಹೊರಭಾಗದಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಿಂತ ನೀರಿನಲ್ಲಿ ಈಡಿಸ್ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗುವುದನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ನಿಂತ ನೀರಿನಿಂದ ಡೆಂಗ್ಯೂ ಮಾತ್ರವಲ್ಲದೆ ಚಿಕೂನ್ಗುನ್ಯಾ, ಮಲೇರಿಯಾ, ಆನೆಕಾಲು ರೋಗ ಹಾಗೂ ಮೆದುಳು ಜ್ವರದಂತಹ ಮಾರಕ ರೋಗಗಳು ಹರಡುವ ಸಾಧ್ಯತೆ ಇದೆ. ಸಾಮಾನ್ಯ ಜ್ವರ ಎಂದು ನಿರ್ಲಕ್ಷ್ಯ ಮಾಡದೆ, ಮೂರು ದಿನಗಳಿಗಿಂತ ಹೆಚ್ಚು ಕಾಲ ಜ್ವರ, ತೀವ್ರ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಹಾಗೂ ಕೀಲು ನೋವು ಕಂಡುಬಂದರೆ ತಕ್ಷಣವೇ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 