ಎಪಿಎಂಸಿ ಚರಂಡಿಗೆ ಶಾಶ್ವತ ಪರಿಹಾರಕ್ಕೆ ಸಾರ್ವಜನಿಕರ ಒತ್ತಾಯ
Public demands permanent solution to APMC drains
ಮಹಾಲಿಂಗಪುರ: ಎಪಿಎಂಸಿ ಪ್ರವೇಶ ದ್ವಾರದ ಬಳಿ ಹಲವು ದಿನಗಳಿಂದ ಚರಂಡಿ ನೀರು ರಸ್ತೆ ಮೇಲೆ ಹರಿದು ಕಸ, ದುರ್ವಾಸನೆ ಹಾಗೂ ಸಂಚಾರ ಸಮಸ್ಯೆ ಉಂಟಾಗಿತ್ತು. ಈ ಕುರಿತು ಪ್ರಕಟವಾದ ವರದಿ ಬಳಿಕ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಸ್ವಚ್ಛತಾ ಕಾರ್ಯ ಕೈಗೊಂಡರು.
ಚರಂಡಿಯಲ್ಲಿದ್ದ ಹೂಳು, ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಗಿಡಗಂಟಿಗಳನ್ನು ಯಂತ್ರೋಪಕರಣಗಳ ನೆರವಿನಿಂದ ತೆರವುಗೊಳಿಸಿದ ಪರಿಣಾಮ ರಸ್ತೆ ಮೇಲೆ ನಿಂತಿದ್ದ ನೀರು ಸರಾಗವಾಗಿ ಹರಿಯಲು ಆರಂಭವಾಗಿದೆ. ಇದರಿಂದ ರೈತರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ನೆಮ್ಮದಿ ದೊರೆತಿದೆ.
ಎಪಿಎಂಸಿ ಆವರಣಕ್ಕೆ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಜನರು ಹಾಗೂ ವಾಹನಗಳು ಆಗಮಿಸುವ ಹಿನ್ನೆಲೆಯಲ್ಲಿ ಚರಂಡಿ ನಿರ್ವಹಣೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಜೊತೆಗೆ ಮಳೆಗಾಲದಲ್ಲಿ ಸಮಸ್ಯೆ ಮರುಕಳಿಸದಂತೆ ನಿಯಮಿತವಾಗಿ ಚರಂಡಿ ಸ್ವಚ್ಛತಾ ಕಾರ್ಯ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 