ಸಾರ್ವಜನಿಕರೇ ಸರ್ಕಾರದ ಯೋಜನೆಗಳ ಲಾಭ ಪಡೆದುಕೊಳ್ಳಿ: ಶಾಸಕ ರಾಜು ಕಾಗೆ..!
Public should take advantage of government schemes: MLA Raju Kage..!
ಕಾಗವಾಡದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ
ಕಾಗವಾಡ 16: ಸಮಾಜದಲ್ಲಿ ಜಾತಿ, ಮತ, ಪಂಥ, ಬಡವ-ಶ್ರೀಮಂತರ ಮಧ್ಯದ ಕಂದಕವನ್ನು ದೂರು ಮಾಡಿ, ಸಮಾನತೆ ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು, ಸಾರ್ವಜನಿಕರು ಸರ್ಕಾರದ ಯೋಜನೆಗಳ ಲಾಭ ಪಡೆದುಕೊಂಡು, ನೆಮ್ಮದಿಯ ಜೀವನ ನಡೆಸಬೇಕೆಂದು ಶಾಸಕ ರಾಜು ಕಾಗೆ ಹೇಳಿದ್ದಾರೆ.
ಅವರು ಶನಿವಾರ ದಿ. 15 ರಂದು ಕಾಗವಾಡ ಪಟ್ಟಣ ಪಂಚಾಯತಿಯ 153 ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳು, ಅಂಬೇಡ್ಕರ್ ಮತ್ತು ವಾಜಪೇಯಿ ವಸತಿ ಯೋಜನೆಯ 92 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ, ಪಟ್ಟಣ ಪಂಚಾಯತಿಗೆ ನೂತನ ಜೆಸಿಬಿ, ಫಾಗಿಂಗ್ ಮತ್ತು ಜೆಟ್ಕಿಂಗ ವಾಹನಗಳ ಹಾಗೂ ಪಂಚಾಯತಿಯ ನೂತನ ಗೊಡಾವನ್ ಉದ್ಘಾಟನೆ ಮತ್ತು ಬಸವನಗರದಲ್ಲಿ ್ಲ ಸ್ವಾಗತ ದ್ವಾರದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಪಟ್ಟಣದ ಅಂಬಾಬಾಯಿ, ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದರು.
ಕಾರ್ಯಕ್ರಮಕ್ಕೆ ಮೊದಲಿಗೆ ದೀಪ ಬೆಳಗಿಸಿ, ಚಾಲನೆ ನೀಡಲಾಯಿತು. ಹಿರಿಯರಾದ ಬಿ.ಜೆ. ಪಾಟೀಲ ಮಾತನಾಡಿದರು. ಉಪತಹಶೀಲ್ದಾರ ರಷ್ಮಿ ಜಕಾತಿ, ಪಿಎಸ್ಐ ಜಿ.ಜಿ. ಬಿರಾದರ, ಮುಖಂಡರಾದ ಜ್ಯೋತಿಕುಮಾರ ಪಾಟೀಲ, ಕಾಕಾ ಪಾಟೀಲ, ಸೌರಭ ಪಾಟೀಲ, ರಮೇಶ ಚೌಗುಲಾ, ಚಿದಾನಂದ ಅವಟಿ, ಅಣ್ಣಾಸಾಬ ಕಠಾರೆ, ರಾಜು ಕರವ, ಪ್ರಕಾಶ ಪಾಟೀಲ ಸೇರಿದಂತೆ ಪಟ್ಟಣದ ಅನೇಕ ಮುಖಂಡರು, ಸಾರ್ವಜನಿಕರು, ಫಲಾನುಭವಿಗಳು ಉಪಸ್ಥಿತರಿದ್ದರು. ಮುಖಂಡ ಜ್ಯೋತಿಕುಮಾರ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ.ಪಂ. ಮುಖ್ಯಾಧಿಕಾರಿ ಕೆ.ಕೆ. ಗಾವಡೆ ಸ್ವಾಗತಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 