ಸಾರ್ವಜನಿಕವಾಗಿ ಕಣ್ಣೀರಿಟ ಅಶೋಕ ಪೂಜೇರಿ
ಲೋಕದರ್ಶನ ವರದಿ
ಗೋಕಾಕ: ಚುನಾವಣೆಯಿಂದ ಹಿಂದೆ ಸರಿಯಲು ಹಣ ಪಡೆದಿದ್ದಾರೆ ಎಂಬ ಆರೋಪ ಹಿನ್ನೆಲೆ, ಬಿಜೆಪಿ ಮುಖಂಡ ಅಶೋಕ ಪೂಜೇರಿ ಅವರು ನೊಂದು ಸಾರ್ವಜನಿಕವಾಗಿ ಗಳಗಳನೇ ಕಣ್ಣೀರಿಟ್ಟರು.
ಅವರು, ಶನಿವಾರದಂದು ನಗರದ ಜ್ಞಾನಮಂದಿರ ಆಧ್ಯಾತ್ಮ ಕೇಂದ್ರದಲ್ಲಿ ಉಪಚುನಾವಣೆ ಹಿನ್ನೆಲೆ ಕರೇದ ಬೆಂಬಲಿಗರ ಸಭೆಯಲ್ಲಿ ಸಾರ್ವಜನಿಕವಾಗಿ ಗಳಗಳನೇ ಅತ್ತು ಬೆಂಬಲಿಗರ ಎದುರು ಎರಡು ಕೊಡ ಮೈಮೇಲೆ ನೀರು ಸುರಿದುಕೊಂಡು, ಕಣ್ಣೀರಿಟ್ಟು ಸಂಗಮನಾಥನ ಮೇಲೆ ಪ್ರಮಾಣ ಮಾಡಿದರು.
ಸಭೆ ಬಳಿಕ ನಾನು ಯಾರ ಬಳಿಯೂ ಒಂದು ರೂಪಾಯಿ ಕೂಡ ಪಡೆದಿಲ್ಲ. ಮೂರು ಚುನಾವಣೆಗಳಲ್ಲಿ 30 ಎಕರೆ ಹೊಲ ಮಾರಿ, ಕೋಟ್ಯಂತರ ಸಾಲ ಮಾಡಿಕೊಂಡಿದ್ದೇನೆ. ಚುನಾವಣೆಯಿಂದ ಹಿಂದೆ ಸರಿಯಲು ನಾನು ಯಾರ ಬಳಿಯೂ ಒಂದು ರೂಪಾಯಿ ಹಣ ಪಡೆದಿಲ್ಲ ಎಂದು ನೊಂದು ಕಣ್ಣೀರಿಟ್ಟು, ಅಶೋಕ ಪೂಜೇರಿ ದೇವರ ಮೇಲೆ ಪ್ರಮಾಣ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 