ದೇವಸ್ಥಾನದ ಮೇಲ್ಚಾವಣಿ ಕಾಮಗಾರಿಗೆ ಪೂಜೆ
Puja for temple roof work
ಬೆಳಗಾವಿ 21: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೊಂಡಸಕೊಪ್ಪ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ವಿಠ್ಠಲ ಬೀರದೇವರ ದೇವಸ್ಥಾನ ಕಟ್ಟಡದ ಮೇಲ್ಚಾವಣಿಗೆ ಕಾಂಕ್ರೀಟ್ (ಸ್ಲ್ಯಾಬ್) ಹಾಕುವ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳು, ಗ್ರಾಮದ ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
1.50 ಕೋಟಿ ರೂ, ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ. ದೇವಸ್ಥಾನದ ನಿರ್ಮಾಣಕ್ಕಾಗಿ ಬಾಗಲಕೋಟೆಯ ಶೆಲ್ಲಿಕೇರಿಯಿಂದ ವಿಶೇಷ ಕಲ್ಲುಗಳನ್ನು ತರಿಸಿ, ಒಡಿಶಾ ರಾಜ್ಯದ ಶಿಲ್ಪಕಾರರಿಂದ ಕಲ್ಲುಗಳನ್ನು ಕೆತ್ತನೆ ಮಾಡಿಸಲಾಗಿದ್ದು, ಆದಷ್ಟು ಬೇಗ ಸುಂದರ ದೇವಸ್ಥಾನ ನಿರ್ಮಾಣ ಮಾಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.ಈ ಸಂದರ್ಭದಲ್ಲಿ ವಿಠ್ಠಲ ಸಾಂಬ್ರೇಕರ್, ಮಹಾಲಿಂಗ ಸಾಂಬ್ರೇಕರ್, ಮಲ್ಲಪ್ಪ ಸಾಂಬ್ರೇಕರ್, ಸುರೇಶ ಕರಗುಪ್ಪಿಕರ್, ಬಾಗಣ್ಣ ಸಾಂಬ್ರೇಕರ್, ವಿಠ್ಠಲ ರಾಮಾ ಸಾಂಬ್ರೇಕರ್, ಪಿರಾಜಿ ಸಾಂಬ್ರೇಕರ್, ಪಕೀರ್ ಸಾಂಬ್ರೇಕರ್, ಗಂಗಪ್ಪ ಸಾಂಬ್ರೇಕರ್, ಗಂಗಾರಾಮ ಅಷ್ಠೆಕರ್, ದೇವಸ್ಥಾನ ಕಮಿಟಿಯ ಸದಸ್ಯರು, ಗ್ರಾಮ ಪಂಚಾಯತಿಯ ಸದಸ್ಯರು ಸೇರಿದಂತೆ ಗ್ರಾಮದ ನಾಗರಿಕರು ಉಪಸ್ಥಿತರಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 