ಮಂಗಳೂರು ನಗರದಲ್ಲಿ ಪಂಪ್ ವೆಲ್ ಮೇಲ್ಸೇತುವೆ ಲೋಕಾರ್ಪಣೆ
ಮಂಗಳೂರು, ಜ 31, ಮಂಗಳೂರು ನಗರದ ದೀರ್ಘಕಾಲದ ಬಾಕಿ ಉಳಿದುಕೊಂಡಿದ್ದ ಪಂಪ್ ವೆಲ್ ಮೇಲ್ಸೇತುವೆ ಯನ್ನು ಜಿಲ್ಲಾಉಸ್ತುವಾರಿ ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಶುಕ್ರವಾರ ಉದ್ಘಾಟಿಸಿದರು. ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಬಹುತೇಕ 10 ವರ್ಷಗಳ ವಿಳಂಬ, ಒಂದರ ನಂತರ ಒಂದರಂತೆ ಹಲವು ಅಂತಿಮ ಗಡುವುಗಳು ಮುಗಿದ ನಂತರ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ- ಕುಂದಾಪುರ ನಡುವಣ ನಾಲ್ಕು ಪಥ ಮಾರ್ಗದ ಭಾಗವಾಗಿ ಪಂಪ್ ವೆಲ್ ಮೇಲ್ಸೇತುವೆ ಕೊನೆಗೆ ಶುಕ್ರವಾರ ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಗೊಂಡಿತು. ನಂತೂರು- ಎನ್ ಐ ಟಿ ಕೆ ಸರತ್ಕಲ್ ಮಾರ್ಗ ಹೊರತುಪಡಿಸಿ, ರಾಷ್ಟ್ರೀಯ ಹೆದ್ದಾರಿ 66 ತಲಪಾಡಿ- ಕುಂದಾಪುರ ನಡುವಣ ನಾಲ್ಕುಪಥ ಮಾರ್ಗದ ಕಾಮಗಾರಿ 2010 ಸೆಪ್ಟಂಬರ್ ನಲ್ಲಿ ಆರಂಭಗೊಂಡಿತ್ತು, ಪಂಪ್ ವೆಲ್ (ಮಹಾ ವೀರ ಸರ್ಕಲ್) ಮೇಲ್ಸೇತುವೆ ಈ ಯೋಜನೆಯ ಭಾಗವಾಗಿತ್ತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 