ಪುನೀತ್ ರಾಜಕುಮಾರ ಸಮಾಜಮುಖಿ ಸೇವೆ ಅನನ್ಯ : ಪೇಂಟರ್ ಉಪ್ಪಿರಾಜ
Puneeth Rajkumar's social service is unique
ಕಂಪ್ಲಿ 17: ಸ್ಥಳೀಯ ಮಹಾತ್ಮಗಾಂಧಿ ವೃತ್ತದಲ್ಲಿರುವ ಆಟೋ ನಿಲ್ದಾಣ ಬಳಿಯಲ್ಲಿ ದಿ.ಡಾ.ಪುನೀತ್ ರಾಜಕುಮಾರ ಅವರ 50ನೇ ವರ್ಷದ ಜನ್ಮದಿನದ ಅಂಗವಾಗಿ ಪುನೀತ್ ರಾಜಕುಮಾರ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಮತ್ತು ಲೇಖನಿ ಸಾಮಾಗ್ರಿಗಳನ್ನು ಸೋಮವಾರ ವಿತರಿಸಲಾಯಿತು.
ಅಭಿಮಾನಿ ಪೇಂಟರ್ ಉಪ್ಪಿರಾಜ ಮಾತನಾಡಿ, ಸಮಾಜಕ್ಕಾಗಿ ಸಲ್ಲಿಸಿದ ಸೇವೆ, ಸಂಕಷ್ಟದಲ್ಲಿದ್ದವರಿಗೆ ತಾವು ಮಾಡಿದ ಸಹಾಯವನ್ನು ಯಾರೊಬ್ಬರ ಬಳಿಯೂ ಹೇಳಿಕೊಳ್ಳದ ಮೇರು ವ್ಯಕ್ತಿತ್ವ ಪುನೀತ್ ರಾಜ್ಕುಮಾರ್ ಅವರದ್ದಾಗಿತ್ತು. ಪುನೀತ್ ನಾಡಿನ ಶಕ್ತಿ. ಮಾನವೀಯತೆಯ ಗುಣಗಳನ್ನು ಹೊಂದಿದ್ದ ಮಹಾನ್ ಚೇತನ. ಚಿಕ್ಕವಯಸ್ಸಿನಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದವ. ಚಿತ್ರರಂಗ ಹಾಗೂ ಸಾಮಾಜಿಕವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರಿಲ್ಲದ ಕರುನಾಡು ಬಡವಾಗಿದೆ. ವೃದ್ಧಾಶ್ರಮ, ಅನಾಥಾಲಯ, ಮಕ್ಕಳ ಶಿಕ್ಷಣಕ್ಕೆ ನೆರವು ನೀಡಿ ಜನ ಸೇವೆಯನ್ನು ಸದ್ದಿಲ್ಲದೆ ಮಾಡಿದ ಪುನೀತ್ ಸಾವಿನ ನೋವಿನ ಛಾಯೆಯಿಂದ ಹೊರ ಬರಲಾಗುತ್ತಿಲ್ಲ.
ಪುನೀತ್ ಅವರ ಸೇವೆ ಅನನ್ಯವಾಗಿದೆ. ಅವರ ಮಾರ್ಗದರ್ಶನದಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡೋಣ ಎಂದರು.
ಈ ಸಂದರ್ಭದಲ್ಲಿ ಅಭಿಮಾನಿಗಳಾದ ಸಿಂಹಾದ್ರಿ, ಆಕಾಶ, ಮಸ್ತಾನ್, ವಿ.ವೆಂಕಟೇಶ, ಹೊನ್ನೂರಸ್ವಾಮಿ, ಅಶೋಕ, ರಮೇಶ, ಕೆ.ರಿಯಾನ್, ಕೆ.ಮಹಾಭಾಷಾ, ದಾದು, ಕುಮಾರ, ನಾಗರಾಜ ಸೇರಿದಂತೆ ಮಕ್ಕಳು ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 