ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದಿಂದ ಖಾದ್ರಿಗೆ ಸನ್ಮಾನ
Qadri felicitated by State Approved Electrical Contractors Association
ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದಿಂದ ಖಾದ್ರಿಗೆ ಸನ್ಮಾನ
ಶಿಗ್ಗಾವಿ 07 : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷ ಸೈಯದ್ ಅಜ್ಜಂಪಿರ್ ಖಾದ್ರಿ ಅವರು ಕ್ಯಾಬಿನೆಟ್ ದರ್ಜೆ ಸ್ಥಾನಮಾನದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅವರಿಗೆ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ಶಿಗ್ಗಾವಿ ತಾಲೂಕ ಘಟಕದಿಂದ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದ ನಿಕಟಪೂರ್ವ ರಾಜ್ಯ ಕೇಂದ್ರ ಕಾರ್ಯಕಾರಿ ಸದಸ್ಯ ಮಂಜುನಾಥ್ ಮಣ್ಣಣ್ಣವರ ನೇತೃತ್ವದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಮ್ಮ ತಾಲೂಕಿನ ಜನಪರ ರೈತಪರ ಕಾಳಜಿವುಳ್ಳ ನಾಯಕರು ಅಧ್ಯಕ್ಷರಾಗಿರುವುದು ನಮ್ಮ ತಾಲೂಕು ಜಿಲ್ಲೆಗೆ ಹೆಮ್ಮೆಯ ಸಂಗತಿ ಆಗಿದೆ ಎಂದು ಮಂಜುನಾಥ್ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ತಾಲೂಕ ಸಂಘದ ಅಧ್ಯಕ್ಷ ಎನ. ಎಸ್. ಹಿರೇಮಠ, ಉಪಾಧ್ಯಕ್ಷ ಅಬ್ದುಲ್ ಹರಪನಹಳ್ಳಿ, ಚಂದ್ರಶೇಖರ ಕೊಪರ್ಡೇ, ಕೆ ಟಿ ಪಾಟೀಲ, ಶಿವರಾಜ, ಶರಣಪ್ಪ ದೇಸಾಯಿ, ಸುರೇಶ್ ಬಿಸನಹಳ್ಳಿ, ಬೂದನೂರ, ನವೀನ ಇಂಗಳಗಿ, ಈರಣ್ಣ ಎಲಿಗಾರ, ಅಬ್ದುಲ್ ಆದಂಬಾಯಿ, ಮುಲ್ಲಾ ಇನ್ನು ಹಲವಾರು ಗುತ್ತಿಗೆದಾರರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 