ಸರ್ಕಾರದ ಸಹಾಯಧನದೊಂದಿಗೆ ಗುಣಮಟ್ಟದ ಮನೆ ನಿರ್ಮಿಸಿಕೊಳ್ಳಬೇಕು: ಶಾಸಕ ಐಹೊಳೆ
Quality houses should be built with government subsidies: MLA Aihole
ರಾಯಬಾಗ, 07 : ಸರ್ಕಾರ ನೀಡುವ ಸಹಾಯಧನದೊಂದಿಗೆ ತಮ್ಮ ಹಣವನ್ನು ಹಾಕಿ ಗುಣಮಟ್ಟದ ಮನೆಗಳನ್ನು ನಿರ್ಮಿಸಿಕೊಳ್ಳಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಬುಧವಾರ ಪಟ್ಟಣದ ಶಾಸಕರ ಗೃಹಕಚೇರಿಯಲ್ಲಿ ನಿಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗರಾಳ ಗ್ರಾಮದ ವಸತಿ ರಹಿತರಿಗೆ ಬಸವ ವಸತಿ ಯೋಜನೆಯಡಿ (ಹೆಚ್ಚುವರಿ) ಮಂಜೂರಾದ 40 ಫಲಾನುಭವಿಗಳಿಗೆ ಮನೆ ಕಟ್ಟಡ ನಿರ್ಮಾಣ ಆದೇಶ ಪ್ರತಿಗಳನ್ನು ವಿತರಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಮನೆಗಳ ನಿರ್ಮಾಣದ ಜೊತೆಗೆ ಶೌಚಾಲಯಗಳನ್ನು ಕೂಡ ನಿರ್ಮಿಸಿಕೊಳ್ಳಬೇಕು. ಬಯಲು ಶೌಚ ಮುಕ್ತ ಗ್ರಾಮ ಮಾಡಲು ಎಲ್ಲರೂ ಕೈಜೋಡಿಸಬೇಕೆಂದರು.
ಗ್ರಾ.ಪಂ.ಸದಸ್ಯರಾದ ಅರುಣ ಐಹೊಳೆ, ಅಪ್ಪಾಸಾಬ ಕೆಂಗನ್ನವರ, ಸಿಬ್ಬಂದಿ ಮಲ್ಲು ಕಾಂಬಳೆ, ಭೀಮು ಮುಧೋಳೆ, ಸತ್ಯಪ್ಪ ದಾವಣೆ, ನಿಲಪ್ಪ ಐಹೊಳೆ, ತಮ್ಮಾಣಿ ಗೊಂಡೆ, ಕುಮಾರ ಗುರವ, ಬಸಲಿಂಗ ಮಗದುಮ್ಮ, ಈರಗೌಡ ಪಾಟೀಲ, ಮಹೇಶ ಕರಮಡಿ, ಬಾಳು ಹಳಾಜೆ ಹಾಗೂ ಫಲಾನುಭವಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 