ಜಮೀನು ವಿಚಾರವಾಗಿ ಜಗಳ: ಮೂಗು ಕತ್ತರಿಸಿದ ಸೋದರಳಿಯ
Quarrel over land: Nephew cut off nose
ರಾಜಸ್ಥಾನ 19: ಜಮೀನು ವಿವಾದಕ್ಕೆ ಸಂಬಂಧಿಸಿ ನಡೆದ ಗಲಾಟೆಯಲ್ಲಿ ಸೋದರಳಿಯ ತನ್ನ ಚಿಕ್ಕಮ್ಮನ ಮೂಗನ್ನೇ ಕತ್ತರಿಸಿದ ಘಟನೆಯೊಂದು ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಜಲೋರ್ನ ಸೈಲಾ ಮೂಲದ ಕುಕಿ ದೇವಿ ಎನ್ನಲಾಗಿದೆ.
ಜಮೀನಿನ ವಿಚಾರವಾಗಿ ಸಂಬಂಧಿಕರ ನಡುವೆ ಆಗಾಗ ಜಗಳಗಳು ನಡೆಯುತಿತ್ತು, ಒಂದು ದಿನ ಅದೇ ಜಮೀನು ವಿಚಾರವಾಗಿ ಜಗಳ ಶುರುವಾಗಿ, ಗಂಭೀರ ಹಂತಕ್ಕೆ ತಲುಪಿ ಕುಕಿ ದೇವಿಯ ಸೋದರಳಿಯ ಓಂ ಪ್ರಕಾಶ್ ತನ್ನ ಕೈಯಲ್ಲಿದ್ದ ಚಾಕುವಿನಿಂದ ಕುಕಿ ದೇವಿಯ ಮೂಗನ್ನು ಕತ್ತರಿಸಿದ್ದಾನೆ, ಈ ವೇಳೆ ಮೂಗಿನ ಭಾಗ ತುಂಡಾಗಿ ನೆಲಕ್ಕೆ ಬಿದ್ದಿದ್ದು ರಕ್ತ ಹರಿಯತೊಡಗಿದೆ, ಕೂಡಲೇ ಕುಕಿ ದೇವಿ ತುಂಡಾದ ಮೂಗನ್ನು ಹೆಕ್ಕಿ ತನ್ನ ಬ್ಯಾಗ್ ಒಳಗೆ ಇಟ್ಟು ಪಾಲಿಯಲ್ಲಿರುವ ಬಂಗಾರ್ ಆಸ್ಪತ್ರೆಗೆ ಓಡೋಡಿ ಬಂದಿದ್ದಾಳೆ.
ಬಂಗಾರ್ ಆಸ್ಪತ್ರೆಯ ಡಾ.ಜುಗಲ್ ಮಹೇಶ್ವರಿ ಒಮ್ಮೆ ಪ್ರಾಥಮಿಕ ಚಿಕಿತ್ಸೆ ನೀಡಿ ಪ್ಲಾಸ್ಟಿಕ್ ಸರ್ಜರಿ ಮೂಲಕ ಮಾತ್ರ ಅದನ್ನು ಮರು ಜೋಡಿಸಲು ಸಾಧ್ಯ ಎಂದು ಹೇಳಿ ಜೋಧ್ಪುರದ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ, ಸದ್ಯ ಕುಕಿ ದೇವಿಗೆ ಜೋಧ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದು ಅಪಾಯದಿಂದ ಪಾರಾಗಿದ್ದಾಳೆ.
ಓಂ ಪ್ರಕಾಶ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ,
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 