ಹೋರ್ತಿ ಮಲ್ಲಿಕಾರ್ಜುನ ಶಾಲೆಯಲ್ಲಿ ರಸಪ್ರಶ್ನೆ ಕಾರ್ಯಕ್ರಮ
Quiz program at Horthi Mallikarjuna School
ಹೋರ್ತಿ ಮಲ್ಲಿಕಾರ್ಜುನ ಶಾಲೆಯಲ್ಲಿ ರಸಪ್ರಶ್ನೆ ಕಾರ್ಯಕ್ರಮ
ಇಂಡಿ 09: ತಾಲೂಕಿನ ಹೋರ್ತಿ ಮಲ್ಲಿಕಾರ್ಜುನ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆ ಹೊರ್ತಿಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಭಾಷಾ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಮಕ್ಕಳು ಬಹು ಉತ್ಸಾಹದಿಂದ ಭಾಗವಹಿಸಿದರು.
ಸ್ಪರ್ಧೆಯಲ್ಲಿ ಕವಿ ಕಾವ್ಯ ಕಣಜ, ವೇಗ ಆವೇಗ, ಇತಿಹಾಸ ಇಕ್ಷುವನ, ವ್ಯಾಕರಣ ವೈಭವ ಎಂದೆಲ್ಲಾ ಸುತ್ತುಗಳಿದ್ದು ಕನ್ನಡ ಭಾಷೆಯ ಪಕ್ಷಿನೋಟವನ್ನೇ ಮಕ್ಕಳು ಸವಿದರು. ಮಕ್ಕಳ ಭಾಷಾ ಸಾಮರ್ಥ್ಯ ಅಳೆಯುವಲ್ಲಿ ಈ ಕಾರ್ಯಕ್ರಮ ಬಹು ಯಶಸ್ವಿಯಾಯಿತು.ಕಾರ್ಯಕ್ರಮದ ಕೊನೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಬಿ ಬಿ ಗಡ್ಡದ ಮಾತನಾಡಿ ರಸಪ್ರಶ್ನೆ ಕಾರ್ಯಕ್ರಮವು ವಿದ್ಯಾರ್ಥಿಗಳ ಜ್ಞಾನವನ್ನು ಪರೀಕ್ಷಿಸಲು, ಕಲಿಕೆಯನ್ನು ಪ್ರೋತ್ಸಾಹಿಸಲು ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಸಹಾಯ ಮಾಡುತ್ತದೆ. ಇದು ಸಾಮಾನ್ಯ ಜ್ಞಾನವನ್ನು ಹೆಚ್ಚಿಸಲು, ವಿಷಯಗಳ ಕುರಿತು ತಿಳುವಳಿಕೆಯನ್ನು ಆಳವಾಗಿಸಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಪಡಿಸಲು ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ. ಮಕ್ಕಳಲ್ಲಿ ಭಾಷಾಭಿಮಾನ ಮೂಡಿಸಲು ರಸಪ್ರಶ್ನೆ ಕಾರ್ಯಕ್ರಮ ಅದ್ಭುತ ವಿಧಾನವಾಗಿದ್ದು, ಸ್ಪರ್ಧಾ ಮನೋಭಾವನೆ ಮೂಡಿಸುತ್ತದೆ. ಹೀಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈ ಮೂಲಕ ಸಂಸ್ಥೆಯ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುವುದು ಎಂದು ಹೇಳಿದರು.
ಸಂಸ್ಥೆಯ ನಿರ್ದೇಶಕರಾದ ಗುರುನಾಥ ಭೋಸಗಿ, ಅಣ್ಣಪ್ಪ ಪೂಜಾರಿ ಹಾಗೂ ಶಾಲೆಯ ಪ್ರಾಂಶುಪಾಲ ಪ್ರೊ. ಅಣ್ಣಪ್ಪ ಎಮ್ ಶಿರೂರ ಹಾಗೂ ಗುರುಗಳು ಉಪಸ್ಥಿತರಿದ್ದರು.
ಸವಿತಾ ಗಡ್ಡದ, ಅನುಷಾ ಮಹಿಷಿ, ಲಕ್ಷ್ಮಿ ಕುಂಬಾರ ತೀಪುಗಾರರಾಗಿ ಕಾರ್ಯನಿರ್ವಹಿಸಿದರು. ಗುರುಗಳಾದ ಚನ್ನವೀರ ಹಿರೇಮಠ ಅಜರ್ ಮಲ್ಲಾಡ್ಕರ್, ರವಿ ಕಟ್ಟಿಮನಿ, ಆಕಾಶ ಇಂಗಳೇಶ್ವರ್, ಸಂಗಪ್ಪ ಹಲಿಂಗಲಿ ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 