ಜೆಡಿಎಸ್ ಪ್ರಾಥಮಿಕ ಸ್ಥಾನಕ್ಕೆ ರಮೇಶ್ ಬಾಬು ರಾಜೀನಾಮೆ
ಬೆಂಗಳೂರು, ಮಾ 7, ಪಕ್ಷದ ವರಿಷ್ಠರ ನಡೆ ಹಾಗೂ ಪಕ್ಷದಲ್ಲಿ ಸೂಕ್ತಸ್ಥಾನಮಾನ ಸಿಗದ ಹಿನ್ನಲೆ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಮೇಲ್ಮನೆಯ ಮಾಜಿ ಸದಸ್ಯ ರಮೇಶ್ ಬಾಬು ರಾಜೀನಾಮೆ ನೀಡಿದ್ದು ದಾವಣಗೆರೆಯಲ್ಲಿ ರಾಜೀನಾಮೆ ಸಲ್ಲಿಸಿರುವುದನ್ನು ಅವರು ಸ್ಪಷ್ಟಪಡಿಸಿದ್ದಾರೆ.ಆಗ್ನೇಯ ಪದವೀಧರರ ಕ್ಷೇತ್ರದಿಂದ ಜಾತ್ಯತೀತ ಜನತಾ ದಳ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಬೇಸರಗೊಂಡಿರುವ ರಮೇಶ್ ಬಾಬು ಜೆಡಿಎಸ್ಗೆ ವಿದಾಯ ಹೇಳಿದ್ದಾರೆ. ಪದವೀಧರ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ರಮೇಶ್ ಬಾಬು ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆಯೂ ಇದೆ ಹಾಗೂ ಬಿಜೆಪಿ ಸೇರುವ ಸಾಧ್ಯತೆಯಿದೆ ಎನ್ನಲಾಗಿದೆಯಾದರೂ ಅದಿನ್ನೂ ಸ್ಪಷ್ಟವಾಗಿಲ್ಲ.ಜೆಡಿಎಸ್ನಲ್ಲಿ ಪ್ರಮುಖ ವಕ್ತಾರರಾಗಿಯೂ ಗುರುತಿಸಿಕೊಂಡಿದ್ದ ರಮೇಶ್ ಬಾಬು ಅವರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಪಕ್ಷದಲ್ಲಿ ಸೂಕ್ತಸ್ಥಾನಮಾನ ಸಿಕ್ಕಿರಲಿಲ್ಲ.ಹಾಗೂ ಪಕ್ಷದಲ್ಲಿ ಕೆಲವರ ಸರ್ವಾಧಿಕಾರ ಮತ್ತು ವರಿಷ್ಠರ ನಿರ್ಲಕ್ಷವೂ ಅವರನ್ನು ಬೇಸರಗೊಳಿಸಿತ್ತು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 