RCB ವಿಜಯೋತ್ಸವ ಕಾರ್ಯಕ್ರಮ ರದ್ದು
RCB Victory Day event cancelled
ವಿಜಯಪುರ 05: ಜೂನ್ 8 ರಂದು ಎಂ.ಬಿ.ಪಿ ಮತ್ತು ಎಸ್.ಬಿ.ಪಿ ಅಭಿಮಾನಿಗಳಿಂದ ನಗರದಲ್ಲಿ ಆಯೋಜಿಸಲಾಗಿದ್ದ ಆರಿ್ಸ.ಬಿ ವಿಜಯೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಕಾರ್ಯಕ್ರಮ ಸಂಘಟಕರಾದ ಆಕಾಶ ಪಿ. ಕಲಬುರ್ಗಿ ಮತ್ತು ಶ್ರೀಶೈಲ ರೆಡ್ಡಿ ತಿಳಿಸಿದ್ದಾರೆ.
ನಮ್ಮ ನೆಚ್ಚಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೇ ಮೊದಲ ಬಾರಿಗೆ ಐಪಿಎಲ್- 2025 ಗೆಲ್ಲುವ ಮೂಲಕ 18 ವರ್ಷಗಳ ನಮ್ಮ ಕನಸನ್ಮು ನನಸು ಮಾಡಿತ್ತು. ಆದರೆ, ಬುಧವಾರ ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ವಿಜಯೋತ್ಸವ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಅವಘಡದಲ್ಲಿ ಆರಿ್ಸ.ಬಿ ತಂಡದ 11 ಜನ ಅಪ್ಪಟ ಅಭಿಮಾನಿಗಳು ಸಾವೀಗೀಡಾಗಿದ್ದಾರೆ. ಇದರಿಂದ ನಾವಷ್ಟೇ ಅಲ್ಲ, ಇಡೀ ವಿಶ್ವಾದ್ಯಂತ ಕ್ರಿಕೆಟ್ ಅಭಿಮಾನಿಗಳು ಆಘಾತಗೊಂಡಿದ್ದಾರೆ. ಈ ಘಟನೆ ಆರಿ್ಸ.ಬಿ ತಂಡದ ಗೆಲುವಿನ ಸಂತಸಕ್ಕಿಂತ ಹೆಚ್ಚು ನೋವು ತಂದಿದೆ. ಸೂತಕದ ಈ ಸಮಯದಲ್ಲಿ ಸಂಭ್ರಮಾಚರಣೆ ಮಾಡುವುದು ಸೂಕ್ತವಲ್ಲ.
ಈ ಹಿನ್ನೆಲೆಯಲ್ಲಿ ಜೂನ್ 8 ರಂದು ನಗರದಲ್ಲಿ ಆಯೋಜಿಸಲಾಗಿದ್ದ ಆರಿ್ಸ.ಬಿ ಸಂಭ್ರಮಾಚರಣೆಯನ್ನು ರದ್ದು ಪಡಿಸಲಾಗಿದೆ ಎಂದು ಆಕಾಶ ಪಿ. ಕಲಬುರ್ಗಿ ಮತ್ತು ಶ್ರೀಶೈಲ ರೆಡ್ಡಿ ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 