RCB ವಿಜಯೋತ್ಸವ ಕಾರ್ಯಕ್ರಮ ರದ್ದು
RCB Victory Day event cancelled
ವಿಜಯಪುರ 05: ಜೂನ್ 8 ರಂದು ಎಂ.ಬಿ.ಪಿ ಮತ್ತು ಎಸ್.ಬಿ.ಪಿ ಅಭಿಮಾನಿಗಳಿಂದ ನಗರದಲ್ಲಿ ಆಯೋಜಿಸಲಾಗಿದ್ದ ಆರಿ್ಸ.ಬಿ ವಿಜಯೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಕಾರ್ಯಕ್ರಮ ಸಂಘಟಕರಾದ ಆಕಾಶ ಪಿ. ಕಲಬುರ್ಗಿ ಮತ್ತು ಶ್ರೀಶೈಲ ರೆಡ್ಡಿ ತಿಳಿಸಿದ್ದಾರೆ.
ನಮ್ಮ ನೆಚ್ಚಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೇ ಮೊದಲ ಬಾರಿಗೆ ಐಪಿಎಲ್- 2025 ಗೆಲ್ಲುವ ಮೂಲಕ 18 ವರ್ಷಗಳ ನಮ್ಮ ಕನಸನ್ಮು ನನಸು ಮಾಡಿತ್ತು. ಆದರೆ, ಬುಧವಾರ ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ವಿಜಯೋತ್ಸವ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಅವಘಡದಲ್ಲಿ ಆರಿ್ಸ.ಬಿ ತಂಡದ 11 ಜನ ಅಪ್ಪಟ ಅಭಿಮಾನಿಗಳು ಸಾವೀಗೀಡಾಗಿದ್ದಾರೆ. ಇದರಿಂದ ನಾವಷ್ಟೇ ಅಲ್ಲ, ಇಡೀ ವಿಶ್ವಾದ್ಯಂತ ಕ್ರಿಕೆಟ್ ಅಭಿಮಾನಿಗಳು ಆಘಾತಗೊಂಡಿದ್ದಾರೆ. ಈ ಘಟನೆ ಆರಿ್ಸ.ಬಿ ತಂಡದ ಗೆಲುವಿನ ಸಂತಸಕ್ಕಿಂತ ಹೆಚ್ಚು ನೋವು ತಂದಿದೆ. ಸೂತಕದ ಈ ಸಮಯದಲ್ಲಿ ಸಂಭ್ರಮಾಚರಣೆ ಮಾಡುವುದು ಸೂಕ್ತವಲ್ಲ.
ಈ ಹಿನ್ನೆಲೆಯಲ್ಲಿ ಜೂನ್ 8 ರಂದು ನಗರದಲ್ಲಿ ಆಯೋಜಿಸಲಾಗಿದ್ದ ಆರಿ್ಸ.ಬಿ ಸಂಭ್ರಮಾಚರಣೆಯನ್ನು ರದ್ದು ಪಡಿಸಲಾಗಿದೆ ಎಂದು ಆಕಾಶ ಪಿ. ಕಲಬುರ್ಗಿ ಮತ್ತು ಶ್ರೀಶೈಲ ರೆಡ್ಡಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 