ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ರಾಚಪ್ಪ ಗೊಂಡಬಾಳ ಆಯ್ಕೆ
Rachappa Gondaba selected for Karunada Padma Shri award
ಕೊಪ್ಪಳ 21: ಕರ್ಮ ಭೂಮಿ ಕನ್ನಡ ಸಂಘ ಬಿಚೋಲಿಯಂ ಗೋವಾ ಹಾಗೂ ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಇವುಗಳ ವತಿಯಿಂದ ಕೊಡ ಮಾಡುವ ಪ್ರತಿಷ್ಠಿತ ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ನಿವಾಸಿ, ಕೊಪ್ಪಳ ಜಿಲ್ಲೆಯ ಸಮಾಜ ಸೇವಕ ಹಾಗೂ ಗಿಣಿಗೇರಿಯ ಹೊಸಪೇಟೆ ಸ್ಟೀಲ್ ಲಿಮಿಟೆಡ್ ಕಾರ್ಖಾನೆಯಲ್ಲಿ ಅಸಿಸ್ಟೆಂಟ್ ಫೋರ್ ಮೆನ್ ಆಗಿ ಸೇವೆ ಸಲ್ಲಿಸುತ್ತಿರುವ ರಾಚಪ್ಪ ಗೊಂಡಬಾಳ ರವರು ಆಯ್ಕೆಗೊಂಡಿದ್ದಾರೆ,ಬರುವ ಡಿಸೆಂಬರ್ 7 ರಂದು ಪಕ್ಕದ ಗೋವಾ ರಾಜ್ಯದ ಬಿಚೋಲಿಯಂ ನಗರದ ಹೀರಾ ಬಾಯಿ ಮೆಮೋರಿಯಲ್ ಹಾಲ್ ನಲ್ಲಿ 16 ನೇ ಬಾರಿಗೆ ಜರುಗಲಿರುವ ಗೋವಾ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದಲ್ಲಿ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ನಿವಾಸಿ, ಕೊಪ್ಪಳ ಜಿಲ್ಲೆಯ ಸಮಾಜ ಸೇವಕ ಹಾಗೂ ಗಿಣಿಗೇರಿಯ ಹೊಸಪೇಟೆ ಸ್ಟೀಲ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಅಸಿಸ್ಟೆಂಟ್ ಫೋರ್ ಮೆನ್ ರಾಗಿ ಸೇವೆ ಸಲ್ಲಿಸುತ್ತಿರುವ ಅವರ ಉತ್ತಮ ತಾಂತ್ರಿಕ ಸೇವೆ ಮತ್ತು ಸಮಾಜ ಸೇವೆ ಗಾಗಿ ಅವರನ್ನು ಸದರಿ ಪ್ರಶಸ್ತಿಗೆ ಆಯ್ಕೆ ಮಾಡಿ ಕೊಳ್ಳಲಾಗಿದೆ ಎಂದು ಕಾರ್ಯಕ್ರಮ ಸಂಘಟಕ ,ಕರ್ನಾಟಕ ಜಾಗೃತಿ ವೇದಿಕೆಯ ಸಂಚಾಲಕ ಮಹೇಶ್ ಬಾಬು ಸುರುವೇ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ,
ಸದರಿಯವರಿಗೆ ಈ ಹಿಂದೆಯೂ ಸಹ ಕೊಪ್ಪಳ ಜಿಲ್ಲಾ ಉತ್ಸವದಲ್ಲಿ ನಾಗರಿಕರ ವೇದಿಕೆ ವತಿಯಿಂದ ಕೊಡ ಮಾಡುವ ಕೊಪ್ಪಳ ಐಸಿರಿ ಪ್ರಶಸ್ತಿಯನ್ನು ಸಹ ಅವರ ಉತ್ತಮ ತಾಂತ್ರಿಕ ಸೇವೆ ಮತ್ತು ಸಮಾಜ ಸೇವೆಗಾಗಿ ಪ್ರಶಸ್ತಿ ನೀಡಿ ಸತ್ಕರಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ,ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ನಿವಾಸಿ, ಕೊಪ್ಪಳ ಜಿಲ್ಲೆಯ ಸಮಾಜ ಸೇವಕ ಹಾಗೂ ಗಿಣಿಗೇರಿಯ ಹೊಸಪೇಟೆ ಸ್ಟೀಲ್ ಕಾರ್ಖಾನೆಯ ಅಸಿಸ್ಟೆಂಟ್ ಫೋರ್ ಮೆನ್ ರಾಗಿರುವ ರಾಚಪ್ಪ ಗೊಂಡಬಾಳ ರವರಿಗೆ ಗೋವಾ ಕನ್ನಡಿಗರ ಸಮ್ಮೇಳನದಲ್ಲಿ ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಇಲ್ಲಿನ ಅವರ ಸ್ನೇಹಿತರ ಬಳಗ ಮತ್ತು ಅಭಿಮಾನಿ ಬಳಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ,
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 