'ಚೆನ್ನಮ್ಮ ಸಮಾಧಿ ಅಭಿವೃದ್ಧಿಗೆ ಒಂದು ಕೋಟಿ'
ಬೆಳಗಾವಿ(ಸುವರ್ಣಸೌಧ), ಡಿ.21- ರಾಣಿ ಚೆನ್ನಮ್ಮ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸಲು ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ವಿಧಾನಸಭೆಗೆ ತಿಳಿಸಿದರು.
ವಿಧಾನಸಭೆಯಲ್ಲಿ ಮಂಡನೆಯಾದ ಪ್ರಶ್ನೋತ್ತರದಲ್ಲಿ ಬಿಜೆಪಿ ಶಾಸಕ ಉಮೇಶ್ ಬಿ.ಕತ್ತಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿದ್ದು, ವಿಜಯಪುರ, ಬೀದರ್, ಕಲಬುಗರ್ಿ ಪ್ರದೇಶಗಳ ಸ್ಮಾರಕಗಳನ್ನು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಿ ಡೌಸಿಯರ್ (ದಾಖಲೆ ಪತ್ರ ಒಳಗೊಂಡ ಕಡತ) ಸಿದ್ದಗೊಳಿಸಿ ಅನುಮೋದನೆಗಾಗಿ ಯುನೆಸ್ಕೋಗೆ ಸಲ್ಲಿಸಲಾಗಿದೆ ಎಂದರು.
ಭಾರತೀಯ ಪುರಾತತ್ವ ಇಲಾಖೆಗೆ ಒಳಪಡುವ ಸ್ಮಾರಕಗಳನ್ನು ಹೊರತುಪಡಿಸಿ 162 ರಾಜ್ಯ ಸಂರಕ್ಷಿತ ಸ್ಮಾರಕ ಪ್ರದೇಶಗಳಿವೆ. ಇವುಗಳ ಅಭಿವೃದ್ಧಿಯನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದೆ. ಈ ಪೈಕಿ 29 ಸ್ಮಾರಕಗಳನ್ನು 15.25 ಕೋಟಿ ರೂ.ವೆಚ್ಚದಲ್ಲಿ ಸಂರಕ್ಷಿಸಲಾಗಿದೆ ಎಂದು ತಿಳಿಸಿದರು.
ರೇಣುಕಾಯಲ್ಲಮ್ಮ ಕ್ಷೇತ್ರದಲ್ಲಿ ಐದು ಕೋಟಿ ವೆಚ್ಚದಲ್ಲಿ ಧಾಮರ್ಿಕ ವಸತಿ, ಸಮುದಾಯ ಭವನ, ಸ್ನಾನಗೃಹ, ಲಗೇಜ್ ಕೊಠಡಿ ನಿಮರ್ಾಣ ಮಾಡಲು ಮಂಜೂರು ಮಾಡಿದ್ದು, ಮೊದಲ ಹಂತದಲ್ಲಿ ಎರಡೂವರೆ ಕೋಟಿ ರೂ.ಗಳನ್ನು ಕೆಟಿಐಎಲ್ ಸಂಸ್ಥೆಗೆ ಬಿಡುಗಡೆ ಮಾಡಲಾಗಿದೆ. ಅಲ್ಲದೆ, ತಂಗುದಾಣ ಹಾಗೂ ಕುಡಿಯುವ ನೀರಿನ ಆರ್ಒ ಪ್ಲಾಂಟ್ ನಿಮರ್ಿಸಲು 60 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ವಿಜಯಪುರ, ಬಾದಾಮಿ, ಹಂಪಿ ಸೇರಿದಂತೆ ಪ್ರವಾಸಿ ತಾಣಗಳನ್ನು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿಪಡಿಸಲು ಹೋಟೆಲ್ ಸೌಲಭ್ಯ ಕಲ್ಪಿಸಲು ಸಕರ್ಾರ ಅನುಮೋದನೆ ನೀಡಿದೆ. ಈ ಸಂಬಂಧ ವಿವರವಾದ ಯೋಜನೆ ಸಿದ್ಧಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.
ಬೆಳಗಾವಿ ಜಿಲ್ಲೆಯಲ್ಲಿ ರಾಮತೀರ್ಥ, ರಾಜಹಂಸಘಢ, ನವಿಲು ತೀರ್ಥ, ಸೊಗಲಕ್ಷೇತ್ರ, ಕಿತ್ತೂರು, ಸವದತ್ತಿ ಯಲ್ಲಮ್ಮ, ಮಲಪ್ರಭೆ ಡ್ಯಾಮ್, ಗೋಕಾಕ್ ಫಾಲ್ಸ್, ಗೊಡಚಿನ ಮಲ್ಕಿಪಾಲ್ಸ್, ಧೂಪದಾಳ, ಹಲಸಿ, ಶಬರಿ ವ್ಯಾಲಿ, ನಿಡಸೂಸಿ ಹಾಗೂ ಘಟಪ್ರಭವನ್ನು ಪ್ರವಾಸಿ ತಾಣವನ್ನಾಗಿ ಗುರುತಿಸಲಾಗಿದೆ ಎಂದು ಶಾಸಕ ಜಾರಕಿಹೊಳಿ ಸತೀಶ್ ಲಕ್ಷ್ಮೀಣ್ರಾವ್ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 