ರಾಘವೇಂದ್ರ ನೀಲಣ್ಣವರಗೆ ತಾಲೂಕಾ ರಾಜ್ಯೋತ್ಸವ ಪ್ರಶಸ್ತಿ
Raghavendra Neelanna receives Taluka Rajyotsava award
ರಾಘವೇಂದ್ರ ನೀಲಣ್ಣವರಗೆ ತಾಲೂಕಾ ರಾಜ್ಯೋತ್ಸವ ಪ್ರಶಸ್ತಿ
ರನ್ನ ಬೆಳಗಲಿ 02: ತಾಲೂಕಾ ಆಡಳಿತ,ತಾಲೂಕಾ ಪಂಚಾಯತ ಹಾಗೂ ನಗರಸಭೆ ಮುಧೋಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಾ, ಬಿ ಆರ್ ಅಂಬೇಡ್ಕರ ಹಾಗೂ ಡಾ. ಬಾಬು ಜಗಜೀವನರಾಮ್ ರವರ ಭವನಗಳ ಸಂಕೀರ್ಣದಲ್ಲಿ ಶನಿವಾರ ದಂದು ಜರುಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರ ಮತ್ತು ಯೋಗ ಕ್ಷೇತ್ರಗಳ ಗಣನಿಯ ಸೇವೆ ಗುರುತಿಸಿ ರಾಘವೇಂದ್ರ ನೀಲಣ್ಣವರ ರವರಿಗೆ ಆರ್ ಬಿ ತಿಮ್ಮಾಪುರ ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ತಾಲೂಕ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುನಂದಾ ತೇಲಿ, ಎಪಿಎಂಸಿ ಅಧ್ಯಕ್ಷ ಸಂಗಪ್ಪ ಇಮ್ಮಣ್ಣವರ, ನಗರ ಸಭೆ ಉಪಾಧ್ಯಕ್ಷ ಮಹಿಬೂಬ ಬಾಗವಾನ, ಕಾಂಗ್ರೆಸ್ ಮುಖಂಡ ಹಣಮಂತ ತಿಮ್ಮಾಪುರ,ಮುಧೋಳ ತಾಲೂಕಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸದ್ದುಗೌಡ ಪಾಟೀಲ, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಕಿವಡಿ ನ್ಯಾಯವಾದಿಗಳು, ಕಸಾಪ ತಾಲೂಕಾಧ್ಯಕ್ಷ ಆನಂದ ಪೂಜಾರಿ ತಾಲೂಕಾ ಅಧಿಕಾರಿಗಳಾದ ತಶೀಲ್ದಾರ ಪ್ರಕಾಶ ಗಾಯಕವಾಡ , ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಎಮ್ ಮುಲ್ಲಾ,ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಅಂಬಿಗೇರ, ಆರಕ್ಷಕ ವೃತ್ತಿ ನೀರೀಕ್ಷಕ ಮಹಾದೇವ ಶಿರಹಟ್ಟಿ, ಪೌರಾಯುಕ್ತ ಗೋಪಾಲ ಕಾಸೆ ಮತ್ತು ಇನ್ನಿತರರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 