ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ: ಸಾಂಸ್ಕೃತಿಕ ವಾಹಿನಿ ಲೋಕಾರ್ಪಣೆ
Raghavendra Swami's worship festival: Cultural channel launched
ಬೆಳಗಾವಿ 12: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮತ್ತು ಪರಿಮಳ ಸಾಂಸ್ಕೃತಿಕ ವಾಹಿನಿ ಯು ಟ್ಯೂಬ್ ಚಾನೆಲ್ ಲೋಕಾರೆ್ಣ ಸಮಾರಂಭ ಸೋಮವಾರ ಸಂಜೆ ಗುರುಪ್ರಸಾದ ಕಾಲೋನಿಯಲ್ಲಿ ನಡೆಯಿತು.
ಹಿರಿಯ ಸಾಹಿತಿ, ನಿರ್ದೇಶಕ ಶೀರೀಶ್ ಜೋಶಿ ಅವರ ಮನೆಯ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತಗಾರ ಶ್ರೀಧರ ಕುಲಕರ್ಣಿ ಅವರು ಪರಿಮಳ ಸಾಂಸ್ಕೃತಿಕ ವಾಹಿನಿಯನ್ನು ಲೋಕಾರೆ್ಣಗೊಳಿಸಿದರು. ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ ಎಂ.ಕೆ.ಹೆಗಡೆ ವಹಿಸಿದ್ದರು. ಒಳ್ಳೆಯ ಮಾಧ್ಯಮಗಳಿಗೆ ನೋಡುಗರ ಹಾಗೂ ಓದುಗರ ಕೊರತೆಯಾಗುವುದಿಲ್ಲ. ಹೆಚ್ಚು ಜನರನ್ನು ತಲುಪಬೇಕೆನ್ನುವ ಅಪೇಕ್ಷೆಗಿಂತ ಒಳ್ಳೆಯ ವಿಷಯ ನೀಡಬೇಕೆನ್ನುವ ಉದ್ದೇಶವಿಟ್ಟುಕೊಂಡು ನಡೆಸಿದರೆ ಎಲ್ಲ ಮಾಧ್ಯಮಗಳೂ ಯಶಸ್ವಿಯಾಗುತ್ತವೆ ಎಂದು ಎಂ.ಕೆ.ಹೆಗಡೆ ಹೇಳಿದರು.
ನಿವೃತ್ತ ಸಿವಿಲ್ ಇಂಜಿನಿಯರ್ ವಿಲಾಸ್ ಬೆಂಗೇರಿ ಅವರನ್ನು ಸತ್ಕರಿಸಲಾಯಿತು. ಶೀರೀಶ್ ಜೋಶಿ ಅವರು ಪರಿಮಳ ಸಾಂಸ್ಕೃತಿಕ ವಾಹಿನಿಯ ಉದ್ದೇಶವನ್ನು ಪ್ರಾಸ್ತಾವಿಕವಾಗಿ ತಿಳಿಸಿದರು. ಶರಣಯ್ಯ ಮಠಪತಿ ನಿರೂಪಿಸಿದರು. ಮಂಜುಳಾ ಜೋಶಿ, ರಮೇಶ ಮಿರ್ಜಿ, ಎ.ಎಂ. ಜಯಶ್ರೀ, ಶ್ರದ್ಧಾ ಪಾಟೀಲ, ರಾಜಕುಮಾರ ಕುಂಬಾರ, ಶ್ರೀನಾಥ ಜೋಶಿ, ಶುಭಾ ಜೋಶಿ, ಪಿ.ಜಿ. ಕೆಂಪಣ್ಣವರ್ ಮೊದಲಾದವರು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 