ಬೆಂಬಲ ಬೆಲೆಯಲ್ಲಿ ರಾಗಿ,ಬಿಳಿ ಜೋಳ ಖರೀದಿ ಕೇಂದ್ರ ಪ್ರಾರಂಭ
Ragi, white jowar purchase centre launched at support price
ಹೂವಿನ ಹಡಗಲಿ 26: ದೇಶದ ಆರ್ಥಿಕತೆಯ ಬೆನ್ನೆಲುಬು ರೈತರು, ಸರ್ಕಾರದ ಅನುದಾನ ಮಂಜೂರಾತಿ ಮಾಡಿಸಿ ತಾಲೂಕಿನಲ್ಲಿ ಹೆಚ್ಚಿನ ನೀರಾವರಿ ಕ್ಷೇತ್ರ. ಅಭಿವೃದ್ಧಿ ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಶಾಸಕ ಕೃಷ್ಣನಾಯಕ ಹೇಳಿದರು.ಪಟ್ಟಣದ ಎಪಿಎಂಸಿ ಆವರಣದಲ್ಲಿ ಗುರುವಾರ ಕೇಂದ್ರ ಸರ್ಕಾರವು 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ (ಒಖಕ) ಯೋಜನೆಯಡಿ ಮುಂಗಾರು ರಾಗಿ ಮತ್ತು ಹಿಂಗಾರು ಬಿಳಿ ಜೋಳ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿ ಈ ಭಾಗದಲ್ಲಿಹೆಚ್ಚು ಕೃಷಿಯನ್ನು ಅವಲಂಬಿಸಿದ್ದು,ತುಂಗಭದ್ರಾ ನದಿ ಪಕ್ಕದಲ್ಲೇ ಇದ್ದರು ನೀರಾವರಿ ಸೌಲಭ್ಯ ಕೊರತೆ ಇದೆ. ಕೂಡಲೇ ನೀರಾವರಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿ ರೈತರ ಬೆಳೆದ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ನಿಗದಿಪಡಿಸಬೇಕು ಎಂದು ಸರ್ಕಾರ ವನ್ನು ಒತ್ತಾಯಿಸುವುದಾಗಿ ಹೇಳಿದರು.
ರೈತ ಸಂಘದ ಅದ್ಯಕ್ಷ ಸಿದ್ದಪ್ಪ ಗುಜನೂರು ಮಾತನಾಡಿ ರೈತರು ಬೆಳೆದ ಬೆಳೆಗಳಿಗೆ ಕನಿಷ್ಟ ಬೆಂಬಲ ಘೋಷಣೆ ಮಾಡಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿದರು. ಟಿಎಪಿಸಿಎಂಎಸ್ ವ್ಯವಸ್ಥಾಪಕ ಸೊಪ್ಪಿನ ವೀರಣ್ಣ ಮಾತನಾಡಿ ರೈತರು ಬೆಳೆದ ಮುಂಗಾರು ರಾಗಿ 4886 ಮತ್ತು ಹಿಂಗಾರು ಬಿಳಿ ಜೋಳಕ್ಕೆ 3,669 (ಕ್ವಿಂಟಾಲ್ಗೆ) ಬೆಲೆ ನಿಗದಿಪಡಿಸಲಾಗಿದ್ದು,ಮುಂಗಾರು ರಾಗಿ ಬೆಳೆಗೆ 2308 ರೈತರಿಂದ 71599,50 ಕ್ವಿಂಟಲ್ , ಬಿಳಿ ಜೋಳ ಬೆಳೆ 181 ರೈತರಿಂದ 14322.00 ಹಾಗೂ ಹಿಂಗಾರು ಬಿಳಿ ಜೋಳು ಬೆಳೆ 105 ರೈತರಿಂದ 4865.50 ಕ್ವಿಂಟಲ್ ಖರೀದಿಸಲಾಗುತ್ತದೆ ಎಂದರು. ಇದೇ ವೇಳೆ ಟಿಎಪಿಸಿಎಂಎಸ್ ಅದ್ಯಕ್ಷ ಮಲ್ಕಿಒಡೆಯರ್ ನಾಗಭೂಷಣ, ಸಹಕಾರ ಸಂಘದ ನಿಬಂಧಕ ಶರಣಬಸಪ್ಪ, ಆಹಾರ ನೀರೀಕ್ಷಕ ಭಾರತಿ ಮತ್ತು ನಿರ್ದೇಶಕ ರಾದ ಟಿ.ಮಹಾಂತೇಶ, ಎಂ.ನೆಪೋಲಿಯನ್, ಹಕ್ಕಂಡಿ ಮಹಾದೇವ,ಹಣ್ಣಿ ಸುಮಾ,ಸಂಧ್ಯಾ ಇತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 