'ಕಾಫಿ ವಿಥ್ ಕರಣ್' ಬಗ್ಗೆ ಮತ್ತೊಮ್ಮೆ ಮಾತನಾಡಿದ ರಾಹುಲ್
ನವದೆಹಲಿ, ಆ 20 ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲೂ ಕೆಲ ಪಂದ್ಯಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಕನ್ನಡಿಗರ ಮನ ಗೆದ್ದಿದ್ದ ಕೆಎಲ್ ರಾಹುಲ್ 'ಕಾಫಿ ವಿಥ್ ಕರಣ್' ಟಿವಿ ಕಾರ್ಯಕ್ರಮದ ಮೂಲಕ ವಿವಾದಕ್ಕೆ ಗುರಿಯಾಗಿದ್ದರು. ಆ ವಿವಾದಕ್ಕೆ ಸಂಬಂಧಿಸಿ ಮತ್ತೆ ರಾಹುಲ್ ತುಟಿ ಬಿಚ್ಚಿದ್ದಾರೆ.
" ನಿಜ ಹೇಳಬೇಕೆಂದರೆ, ಈ ವಿವಾದದಿಂದ ಕೊಂಚ ಕಹಿ ಅನುಭವ ಆಗಿತ್ತು. ಅದು ನನ್ನ ಮೇಲೆ ಗಂಭೀರ ಪರಿಣಾಮ ಬೀರಿತ್ತು. ನನ್ನನ್ನು ದೂರುವಂತೆ ಮಾಡಿತ್ತು. ಆ ವೇಳೆ ನಾನು ಸಿಟ್ಟುಗೊಂಡಿದ್ದೆ ಕೂಡ. ಆದರೆ ನಾನು ಈಗ ಅದರಿಂದ ಹೊರ ಬಂದಿದ್ದೇನೆ. ಎಲ್ಲವನ್ನೂ ಸ್ವೀಕರಿಸುವ ವ್ಯಕ್ತಿಯಾಗಿದ್ದೇನೆ. ಎಂದು ಅವರೇ ಸ್ವತಃ ಹೇಳಿಕೊಂಡಿದ್ದಾರೆ.
ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ನಡೆಸಿಕೊಡುವ ಜನಪ್ರಿಯ ಟಿವಿ ಶೋ 'ಕಾಫಿ ವಿಥ್ ಕರಣ್'ನಲ್ಲಿ ರಾಹುಲ್ ಮತ್ತು ಸಹ ಆಟಗಾರ, ಟೀಮ್ ಇಂಡಿಯಾ ಆಲ್ ರೌಂಡರ್ ಹಾದರ್ಿಕ್ ಪಾಂಡ್ಯ ಪಾಲ್ಗೊಂಡಿದ್ದರು. ಆ ಶೋನಲ್ಲಿ ಮಹಿಳೆಯರ ಕುರಿತು ಮತ್ತು ಲೈಂಗಿಕತೆ ಬಗ್ಗೆ ಕೀಳು ಅಭಿರುಚಿಯ, ಸ್ವೇಚ್ಛೆಯ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರು.
ಮಾತು ಮುಂದುವರೆಸಿದ ರಾಹುಲ್, 'ನಾನು ಕ್ರಿಕೆಟ್ನತ್ತ ಹೆಚ್ಚು ಗಮನ ಹರಿಸಬೇಕಿದೆ. ಜಿಮ್, ಮೈದಾನ, ಅಭ್ಯಾಸದಲ್ಲಿ ಜಾಸ್ತಿ ಸಮಯ ಕಳೆಯಬೇಕಿದೆ. ಇದು ನಾನು ವೃತ್ತಿಪರನಾಗಿ ರೂಪುಗೊಳ್ಳಲು ನೆರವಾಗಲಿದೆ. ಈ ಮೊದಲೇ ನಾನು ಹೇಳಿರುವಂತೆ ಕ್ರಿಕೆಟ್ ಒಂದೇ ನನಗೆ ಗೊತ್ತಿರುವ ಕಲೆ. ಅದು ಬಿಟ್ಟು ಜೀವನೋಪಾಯಕ್ಕೆ ನನಗೆ ಇನ್ಯಾವುದು ಗೊತ್ತಿಲ್ಲ. ಹಾಗಾಗಿ ಕ್ರಿಕೆಟ್ಗೆ ಏನೆಲ್ಲಾ ಬೇಕಿದೆಯೋ ಅವೆಲ್ಲವನ್ನೂ ನಾನು ಮಾಡಬೇಕಿದೆ,' ಎಂದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 