ಪಹಲ್ಗಾಮ್ ಭಯೋತ್ಪಾದಕ ದಾಳಿ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ವಿಶೇಷ ಅಧಿವೇಶನಕ್ಕೆ ರಾಹುಲ್ ಒತ್ತಾಯ
Rahul Gandhi calls for special session to show solidarity against Pahalgam terror attack
ನವದೆಹಲಿ 29: ಪಹಲ್ಗಾಮ್ ಭಯೋತ್ಪಾದಕ ದಾಳಿ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಆದಷ್ಟು ಬೇಗ ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.
ಪತ್ರದ
ಪ್ರತಿಯನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 'ಈ ನಿರ್ಣಾಯಕ ಸಮಯದಲ್ಲಿ,
ಭಯೋತ್ಪಾದನೆಯ ವಿರುದ್ಧ ನಾವು ಯಾವಾಗಲೂ ಒಟ್ಟಾಗಿ ನಿಲ್ಲುತ್ತೇವೆ' ಎಂಬುವುದನ್ನು ಭಾರತ ತೋರಿಸಬೇಕು ಎಂದು ಹೇಳಿದ್ದಾರೆ.
'ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ಈ ನಿರ್ಣಾಯಕ ಸಮಯದಲ್ಲಿ,
ಭಯೋತ್ಪಾದನೆಯ ವಿರುದ್ಧ ನಾವು ಯಾವಾಗಲೂ ಒಗ್ಗಟ್ಟಾಗಿ ನಿಲ್ಲುತ್ತೇವೆ ಎಂಬುವುದನ್ನು ಭಾರತ ತೋರಿಸಬೇಕು. ಇದಕ್ಕಾಗಿ ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಕರೆಯಬೇಕು ಎಂಬುವುದು ವಿರೋಧ ಪಕ್ಷಗಳ ಆಗ್ರಹ. ಅಲ್ಲಿ ಜನ ಪ್ರತಿನಿಧಿಗಳು ತಮ್ಮ
ಏಕತೆ ಮತ್ತು ಬದ್ಧತೆಯನ್ನು ಪ್ರದರ್ಶಿಸಬಹುದು. ಹಾಗಾಗಿ ಆದಷ್ಟು ಬೇಗ ವಿಶೇಷ ಅಧಿವೇಶನ ಕರೆಯಬೇಕೆಂದು ನಾವು ಮನವಿ ಮಾಡುತ್ತೇವೆ' ಎಂದು ಪತ್ರದಲ್ಲಿ ಬರೆದಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 