ಪಹಲ್ಗಾಮ್ ಭಯೋತ್ಪಾದಕ ದಾಳಿ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ವಿಶೇಷ ಅಧಿವೇಶನಕ್ಕೆ ರಾಹುಲ್ ಒತ್ತಾಯ
Rahul Gandhi calls for special session to show solidarity against Pahalgam terror attack
ನವದೆಹಲಿ 29: ಪಹಲ್ಗಾಮ್ ಭಯೋತ್ಪಾದಕ ದಾಳಿ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಆದಷ್ಟು ಬೇಗ ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.
ಪತ್ರದ
ಪ್ರತಿಯನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 'ಈ ನಿರ್ಣಾಯಕ ಸಮಯದಲ್ಲಿ,
ಭಯೋತ್ಪಾದನೆಯ ವಿರುದ್ಧ ನಾವು ಯಾವಾಗಲೂ ಒಟ್ಟಾಗಿ ನಿಲ್ಲುತ್ತೇವೆ' ಎಂಬುವುದನ್ನು ಭಾರತ ತೋರಿಸಬೇಕು ಎಂದು ಹೇಳಿದ್ದಾರೆ.
'ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ಈ ನಿರ್ಣಾಯಕ ಸಮಯದಲ್ಲಿ,
ಭಯೋತ್ಪಾದನೆಯ ವಿರುದ್ಧ ನಾವು ಯಾವಾಗಲೂ ಒಗ್ಗಟ್ಟಾಗಿ ನಿಲ್ಲುತ್ತೇವೆ ಎಂಬುವುದನ್ನು ಭಾರತ ತೋರಿಸಬೇಕು. ಇದಕ್ಕಾಗಿ ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಕರೆಯಬೇಕು ಎಂಬುವುದು ವಿರೋಧ ಪಕ್ಷಗಳ ಆಗ್ರಹ. ಅಲ್ಲಿ ಜನ ಪ್ರತಿನಿಧಿಗಳು ತಮ್ಮ
ಏಕತೆ ಮತ್ತು ಬದ್ಧತೆಯನ್ನು ಪ್ರದರ್ಶಿಸಬಹುದು. ಹಾಗಾಗಿ ಆದಷ್ಟು ಬೇಗ ವಿಶೇಷ ಅಧಿವೇಶನ ಕರೆಯಬೇಕೆಂದು ನಾವು ಮನವಿ ಮಾಡುತ್ತೇವೆ' ಎಂದು ಪತ್ರದಲ್ಲಿ ಬರೆದಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 