ಮೀರತ್ ನಲ್ಲಿ ರಾಹುಲ್ , ಪ್ರಿಯಾಂಕಾರನ್ನು ತಡೆದ ಪೊಲೀಸರು
ಮೀರತ್, ಡಿ 24 ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ
ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ
ಅವರ ಸಹೋದರಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬರಿಗೈಯಲ್ಲಿ ದೆಹಲಿಗೆ ಮರಳಿದ್ದಾರೆ. ಮೀರತ್ ನಲ್ಲಿ ನಿಷೇಧಾಜ್ಞೆ ಜಾರಿಯಿದ್ದ ಹಿನ್ನೆಲೆಯಲ್ಲಿ
ಪೊಲೀಸ್ ಅಧಿಕಾರಿಗಳು ಇವರಿಗೆ ಒಳಪ್ರವೇಶಿಸಲು ಅನುಮತಿ ನೀಡಲಿಲ್ಲ. ಈ ಹಿಂದೆಯೇ ರಾಹುಲ್ ಗಾಂಧಿ ಮೃತರ
ಕುಟುಂಬ ಸದಸ್ಯರ ಭೇಟಿಗೆ ಅನುಮತಿ ಕೇಳಿದ್ದರೂ, ಜಿಲ್ಲಾಡಳಿತ ಅದನ್ನು ನಿರಾಕರಿಸಿತ್ತು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ
ಪೊಲೀಸ್ ಅಧಿಕಾರಿಗಳು ಯಾವುದೇ ನಿರ್ಬಂಧದ ದಾಖಲೆಗಳನ್ನು ತೋರಿಸಲಿಲ್ಲ. ಬದಲಿಗೆ ಮರಳಿ ಹೋಗುವಂತೆ ಮನವಿ
ಮಾಡಿದರು. ಆದ್ದರಿಂದ ನಾವು ಯಾವುದೇ ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡದೆ ಮರಳಿ ಬಂದೆವು
ಎಂದರು. ಪೊಲೀಸ್ ವರಿಷ್ಠಾಧಾರಿ ಅಜಯ್ ಸಹಾನಿ, ಗಾಂಧಿ
ಸಹೋದರರಿಗೆ ನಿರ್ಬಂಧದ ಕುರಿತು ಮಾಹಿತಿ ನೀಡಿದೆವು. ಅವರು ಯಾವುದೇ ಪ್ರತಿಭಟನೆ ನಡೆಸದೆ, ಆದೇಶವನ್ನು
ಪಾಲಿಸಿದರು ಎಂದರು. ಆದರೆ, ಸ್ಥಳೀಯ ಕಾಂಗ್ರೆಸ್
ನಾಯಕ ಇಮ್ರಾನ್ ಮಸೂದ್, ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ನಾಯಕರನ್ನು ತಡೆಗಟ್ಟುತ್ತಿದ್ದಾರೆ
ಎಂದು ಆರೋಪಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 