ಮೀರತ್ ನಲ್ಲಿ ರಾಹುಲ್ , ಪ್ರಿಯಾಂಕಾರನ್ನು ತಡೆದ ಪೊಲೀಸರು
ಮೀರತ್, ಡಿ 24 ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ
ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ
ಅವರ ಸಹೋದರಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬರಿಗೈಯಲ್ಲಿ ದೆಹಲಿಗೆ ಮರಳಿದ್ದಾರೆ. ಮೀರತ್ ನಲ್ಲಿ ನಿಷೇಧಾಜ್ಞೆ ಜಾರಿಯಿದ್ದ ಹಿನ್ನೆಲೆಯಲ್ಲಿ
ಪೊಲೀಸ್ ಅಧಿಕಾರಿಗಳು ಇವರಿಗೆ ಒಳಪ್ರವೇಶಿಸಲು ಅನುಮತಿ ನೀಡಲಿಲ್ಲ. ಈ ಹಿಂದೆಯೇ ರಾಹುಲ್ ಗಾಂಧಿ ಮೃತರ
ಕುಟುಂಬ ಸದಸ್ಯರ ಭೇಟಿಗೆ ಅನುಮತಿ ಕೇಳಿದ್ದರೂ, ಜಿಲ್ಲಾಡಳಿತ ಅದನ್ನು ನಿರಾಕರಿಸಿತ್ತು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ
ಪೊಲೀಸ್ ಅಧಿಕಾರಿಗಳು ಯಾವುದೇ ನಿರ್ಬಂಧದ ದಾಖಲೆಗಳನ್ನು ತೋರಿಸಲಿಲ್ಲ. ಬದಲಿಗೆ ಮರಳಿ ಹೋಗುವಂತೆ ಮನವಿ
ಮಾಡಿದರು. ಆದ್ದರಿಂದ ನಾವು ಯಾವುದೇ ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡದೆ ಮರಳಿ ಬಂದೆವು
ಎಂದರು. ಪೊಲೀಸ್ ವರಿಷ್ಠಾಧಾರಿ ಅಜಯ್ ಸಹಾನಿ, ಗಾಂಧಿ
ಸಹೋದರರಿಗೆ ನಿರ್ಬಂಧದ ಕುರಿತು ಮಾಹಿತಿ ನೀಡಿದೆವು. ಅವರು ಯಾವುದೇ ಪ್ರತಿಭಟನೆ ನಡೆಸದೆ, ಆದೇಶವನ್ನು
ಪಾಲಿಸಿದರು ಎಂದರು. ಆದರೆ, ಸ್ಥಳೀಯ ಕಾಂಗ್ರೆಸ್
ನಾಯಕ ಇಮ್ರಾನ್ ಮಸೂದ್, ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ನಾಯಕರನ್ನು ತಡೆಗಟ್ಟುತ್ತಿದ್ದಾರೆ
ಎಂದು ಆರೋಪಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 