ಕೋವಿಡ್ -19 ಹೋರಾಟ ನಿರತ ಆಶಾ ಕಾರ್ಯಕರ್ತರು, ನರ್ಸ್, ಅಂಗನವಾಡಿ ಕಾರ್ಯಕರ್ತರಿಗೆ ರಾಹುಲ್ ಶ್ಲಾಘನೆ
ನವದೆಹಲಿ, ಏ 10, ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ತ್ಯಾಗವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.ಅಗತ್ಯದ ಸಂದರ್ಭದಲ್ಲಿ ದೇಶಕ್ಕಾಗಿ ದುಡಿಯುವುದೇ ನಿಜವಾದ ದೇಶಭಕ್ತಿ. ನಮ್ಮ ಸಮುದಾಯಕ ಕಾರ್ಯಕರ್ತರು ನಿಜವಾದ ದೇಶಭಕ್ತರು, ತೆರೆಮರೆಯ ನಾಯಕರು, ಮುಖ್ಯವಾಹಿನಿಯಿಂದ ದೂರವುಳಿದು ಜನರ ಸುರಕ್ಷತೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೊಗಳಿದ್ದಾರೆ.
ಭಯ ಹಾಗೂ ತಪ್ಪು ಮಾಹಿತಿಗಳು ವೈರಸ್ ಕಿಂತ ಅಪಾಯಕಾರಿಯಾಗಿರುವ ಪರಿಸ್ಥಿತಿಯಲ್ಲಿ ಸಮುದಾಯ ಕಾರ್ಯಕರ್ತರು ಜನರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದಿದ್ದಾರೆ. ಒಂದು ದೇಶವಾಗಿ ನಾವು ಅವರಿಗೆ ಆಭಾರಿಯಾಗಿದ್ದೇವೆ. ಈ ಬಿಕ್ಕಟ್ಟು ಶಮನವಾದ ನಂತರ ಅವರ ಅಪೂರ್ವ ಕೊಡುಗೆಯನ್ನು ಗುರುತಿಸಿ ಅವರು ಕೆಲಸದ ಪರಿಸ್ಥಿತಿಗಳು ಸುಧಾರಣೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 