ರಾಹುಲ್ ಗಾಂಧಿ, ಜೆ. ಓರಾಮ್ ಕಾರವಾರಕ್ಕೆ
April 16, 2026 05:33 PM | By Admin
Rahul Gandhi visit karwar navay
ರಾಹುಲ್ ಗಾಂಧಿ, ಶರದ್ ಪವಾರ್, ಜುಅಲ್ ಓರಾಮ್ ಕಾರವಾರಕ್ಕೆ
ಕಾರವಾರ ಜ.18 : ದೇಶದ ರಕ್ಷಣಾ ಇಲಾಖೆಯ ಸಂಸದೀಯ ಸಮಿತಿ ಜ.೨೦ ಮತ್ತು ೨೧ ರಂದು ಕಾರವಾರ ಬಳಿಯ ಐಎನ್ ಎಸ್ ಕದಂಬ ನೌಕಾನೆಲೆಗೆ ಭೇಟಿ ನೀಡಲಿದೆ.. ಸಮಿತಿಯ ಅಧ್ಯಕ್ಷ ಜುಅಲ್ ಓರಾಮ್, ಸಮಿತಿಯ ಸದಸ್ಯರಾದ ಸಂಸದ ರಾಹುಲ್ ಗಾಂಧಿ,ಶರದ್ ಪವಾರ್, ಸಂಜಯ್ ರಾಹುತ್ , ಜುಗಲ್ ಕಿಶೋರ್ ಶರ್ಮ, ಅಶೋಕ್ ಬಾಜಪೇಯಿ, ಪ್ರೇಮಚಂದ ಗುಪ್ತಾ , ಟಿ.ಆರ್.ಪರವಿಂದರ್ ಸೇರಿದಂತೆ ಒಟ್ಟು ೩೧ ಜನ ಸಮಿತಿ ಸದಸ್ಯರು ಕಾರವಾರ ನೇವಿಯ ಪ್ರಗತಿ ಕಾಮಗಾರಿಗಳು ಹಾಗೂ ಈಗ ಲಭ್ಯ ಇರುವ ಸೌಕರ್ಯಗಳನ್ನು ವೀಕ್ಷಿಸಿ ಮಾಹಿತಿ ಪಡಯಲಿದ್ದಾರೆ. ೨೧ ಜನ ಲೋಕಸಭಾ ಸದಸ್ಯರು, ೧೧ ಜನ ರಾಜ್ಯ ಸಭಾ ಸದಸ್ಯರು ರಕ್ಷಣಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಇರಲಿದ್ದಾರೆ. ಸದಸ್ಯರು ಜ.೨೧ ರಂದು ಗೋವಾಕ್ಕೆ ಆಗಮಿಸಿ, ನಂತರ ಕಾರವಾರ ಬಳಿಯ ನೇವಿ ತಲುಪಲಿದ್ದಾರೆ. ಅಜ್ಜಿ ಇಂದಿರಾ ಗಾಂಧಿ ಕಾಲದ ಕನಸಿನ ನೌಕಾನೆಲೆ, ರಾಜೀವ್ ಗಾಂಧಿ ಪ್ರಧಾನಿಯಾದಾಗ ಶಂಕುಸ್ಥಾಪನೆ ಯಾಗಿತ್ತು.ಆದರೆ ಅನುಷ್ಠಾನಕ್ಕೆ ಬಂದದ್ದು ಜಾರ್ಜ ಪರ್ನಾಂಡೀಸ್ ರಕ್ಷಣಾ ಸಚಿವರಾಗಿದ್ದಾಗ ,೧೯೯೮ ರಲ್ಲಿ.
ನೌಕಾನೆಲೆ ದೇಶಕ್ಕೆ ಸಮರ್ಪಣೆಯಾದುದು ಪ್ರಣವ್ ಮುಖರ್ಜಿ ರಕ್ಷಣಾ ಸಚಿವರಾದ ೨೦೦೫ ನೇ ಇಸ್ವಿಯಲ್ಲಿ. ಆಗ ಸಂಸದೆ ಸೋನಿಯಾ ಗಾಂಧಿ ಕಾರವಾರ ನೇವಿಗೆ ಭೇಟಿ ನೀಡಿದ್ದು ಸ್ಮರಣೀಯ
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 