ರಾಯಬಾಗ: ಕಾನೂನು ಅರಿವು-ನೆರವು ಕಾರ್ಯಕ್ರಮ
ರಾಯಬಾಗ: ಜನಸಾಮಾನ್ಯರು ಕಾನೂನು ಅರಿವನ್ನು ಪಡೆದುಕೊಂಡು ಸಹಬಾಳ್ವೆಯಿಂದ ಬಾಳಬೇಕು. ಮಹಿಳೆಯರಿಗೆ, ನಿರಾಶ್ರಿತರಿಗೆ, ಮಕ್ಕಳಿಗೆ, ಕಾರ್ಮಿಕರಿಗೆ, ಕಡಿಮೆ ಆದಾಯ ವಿರುವವರೆಗೆ ಹಾಗೂ ಪರಿಶಿಷ್ಟ ಜಾತಿ, ವರ್ಗದವರಿಗೆಉಚಿತ ಕಾನೂನು ಸಲಹೆ, ನೆರವನ್ನು ನೀಡಲಾಗುವುದು, ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಪ್ರಧಾನ ದಿವಾಣಿ ನ್ಯಾಯಾಧೀಶ ಸೋಮಾಎ.ಎಸ್. ಹೇಳಿದರು.
ಬುಧವಾರ ಪಟ್ಟಣದ ಹಿರಿಯದಿವಾಣಿ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ನ್ಯಾಯವಾದಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವುಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದಅವರು, ಸರಕಾರ ನೀಡುವ ಕಾನೂನು ಸವಲತ್ತುಗಳನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ನ್ಯಾಯವಾದಿ ಆರ್.ಬಿ.ಪವಾರ ಮತ್ತು ಟಿ.ಕೆ.ಶಿಂಧೆ ಅವರು ವಿವಿಧ ಕಾನೂನುಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಜಿ.ಬಿ.ಹಳ್ಳಾಕಾಯಿ ವಹಿಸಿದ್ದರು.
ವಕೀಲರ ಸಂಘದ ಅಧ್ಯಕ್ಷ ಎಸ್.ಪಿ.ಪಾಟೀಲ, ಕಾರ್ಯದರ್ಶಿ ಆರ್.ಎಸ್.ಹೊಳ್ಳೆಪ್ಪಗೊಳ, ಸಹಕಾರ್ಯದರ್ಶಿ ಎಸ್.ಆರ್.ಪಾಟೀಲ, ಸ.ಸ.ಅಭಿಯೋಜಕ ಎಮ್.ಪಿ.ಗಾಂವ್ಕರ್, ನ್ಯಾಯವಾದಿಗಳಾದ ಎ.ಬಿ.ಮಂಗಸೂಳೆ, ಎಸ್.ಕೆ.ರೆಂಟೆ, ಸವಿತಾ ಸಂಗೋಟೆ, ಡಿ.ಬಿ.ಮುಡಸಿ, ಎಸ್.ವಿ.ಪೂಜಾರಿ, ಬಿ.ಎಸ್.ಕಾಂಬಳೆ ಸೇರಿದಂತೆಅನೇಕರು ಉಪಸ್ಥಿತರಿದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 