ಮಳೆ ಹಾನಿ: ವಿವಿಧ ಗ್ರಾಮಗಳಿಗೆ ಭೀಮಾಶಂಕರ ಕನ್ನೂರ ಭೇಟಿ
Rain damage: Bhimashankar Kannur visits various villages
ಇಂಡಿ 19: ತಾಲೂಕಿನಾದ್ಯಂತ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಮಳೆಯಿಂದ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿ ಇದ್ದಾರೆ ರೈತರು. ಜಿಟಿ ಜಿಟಿ ಮಳೆಯಿಂದಾಗಿ ಕೆಲವು ಗ್ರಾಮಗಳಲ್ಲಿ ಮನೆಗಳು ಬಿದ್ದು ಹಾನಿಯಾಗಿವೆ. ಈ ಸುದ್ದಿ ತಿಳಿದ ಸುರಿಯುತ್ತಿರುವ ಮಳೆಯಿಂದ ಶಿಥಿಲಗೊಂಡ ಮನೆಗಳ ವೀಕ್ಷಣೆ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ ಭೀಮಾಶಂಕರ ಕನ್ನೂರ ಅವರು ತಾಲೂಕಿನ ಹಡಲಸಂಗ ಗ್ರಾಮ ಪಂಚಾಯಿತಿಗೆ ಭೇಟಿ ಹಾನಿಗೊಂಡ ಮನೆಗಳಿಗೆ ಬೇಟಿ ನೀಡಿದರು.
ನರೇಗಾ ಯೋಜನೆ ಹಾಗೂ ಕರ ವಸೂಲಾತಿ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೊತೆ ಚರ್ಚಿಸಿ ನಿಗದಿ ಪಡಿಸಿದ ಗುರಿಯನ್ನು ಪ್ರಗತಿ ಸಾಧಿಸಬೇಕೆಂದು ಸೂಚಿಸಿದರು. ಬಳ್ಳೊಳ್ಳಿ ಉಪ ತಹಶೀಲ್ದಾರ ಎ ಎಸ್ ಗೋಟ್ಯಾಲ, ಹಡಲಸಂಗ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದು ಲೋಣಿ, ಗ್ರಾಮ ಲೆಕ್ಕಾಧಿಕಾರಿಗಳು ಪ್ರವೀಣ ಲಮಾಣಿ, ಬಳ್ಳೊಳ್ಳಿ ಕಂದಾಯ ನೀರೀಕ್ಷಕ ಬಿ ಜಿ ಕೊಡವನ್ನ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 