ಗೋವಾದಲ್ಲಿ ಬಿಡುವು ಕೊಟ್ಟ ಮಳೆ : ಜನರು ಕೊಂಚ ನಿರಾಳ
ಪಣಜಿ, ಆ 10 ಗೋವಾದಲ್ಲಿ ಸತತ ಐದು ದಿನಗಳ ಕಾಲ ಎಡಬಿಡದೆ ಸುರಿದ ಭಾರೀ ಮಳೆ ಶನಿವಾರ ವಿರಾಮ ನೀಡಿದ್ದು ಜನರು ಸ್ವಲ್ಪ ನಿರಾಳರಾಗಿದ್ದಾರೆ.
ರಾಜ್ಯದ ಕೆಲವು ಕಡೆ ಭಾರೀ ಮಳೆ ಬಿದ್ದಿದ್ದು ಉತ್ತರ ಗೋವಾದಲ್ಲಿ ಸಟ್ಟಾರಿಯಲ್ಲಿ ಬಿರುಗಾಳಿ ಸಹಿತ ಮಳೆ ಬಿದ್ದಿದೆ. ಭಾರೀ ಮಳೆಯಿಂದಾಗಿ ವಿದ್ಯುತ್, ರಸ್ತೆ ಸಂಪರ್ಕ ಕಡಿತಗೊಂಡಿದೆ.
ಇನ್ನೆರಡು ದಿನಗಳಲ್ಲಿ ರಸ್ತೆ, ವಿದ್ಯುತ್ ಮತ್ತು ನೀರಿನ ಸಂಪರ್ಕ ಎಂದಿನಂತಿರಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶುಕ್ರವಾರ ಭರವಸೆ ನೀಡಿದ್ದರು.
ಭಾರೀ ಮಳೆಯಿಂದಾಗಿ ದೈನಂದಿನ ಅಗತ್ಯಗಳಾದ ಹಾಲು, ಹಣ್ಣು, ತರಕಾರಿಗಳ ಲಭ್ಯತೆಗೆ ಅಡಚಣೆಯಾಗಿದೆ. ಕೆಲವೆಡೆ ದುಬಾರಿ ಬೆಲೆಯಿದ್ದು ಜನರು ಪರದಾಡುವಂತಾಗಿದೆ.
ಈ ಮಧ್ಯೆ ಉತ್ತರ ಮತ್ತು ದಕ್ಷಿಣ ಗೋವಾದ ಕೆಲವೆಡೆ ಶನಿವಾರ ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 