ಮುಂದಿನ ಮೂರು ದಿನ ಬೆಂಗಳೂರಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಮೇ 25, ಮುಂದಿನ ಮೂರುದಿನಗಳ ಕಾಲ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆಯಿಂದಿರುವಂತೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಶ್ರೀನಿವಾಸ್ ರೆಡ್ಡಿ ಮುನ್ಸೂಚನೆ ನೀಡಿದ್ದಾರೆ.ಅರಬ್ಬೀ ಸಮುದ್ರ, ಬಂಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿಯಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ ಎಂದಿದ್ದಾರೆ. ಕಳೆದೊಂದು ದಿನದಿಂದ ರಾಜಧಾನಿಯಲ್ಲಿ ಮಳೆ ಆಗುತ್ತಿದೆ. ಭಾನುವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಧಾರಾಕಾರ ಮಳೆ ಸುರಿದ ಪರಿಣಾಮ ಹಲವೆಡೆ ಮರಗಳು ಧರೆಗುಳಿದಿದ್ದವು. ಲಾಕ್ಡೌನ್ ಕರ್ಪ್ಯೂ ಇದ್ದ ಪರಿಣಾಮ ಜನಸಂಚಾರ ವಾಹನ ಸಂಚಾರವಿಲ್ಲದೇ ಯಾವುದೇ ದುರ್ಘಟನೆ, ಅನಾಹುತ ಸಂಭವಿಸಿರಲಿಲ್ಲ.ಆದರೆ ಬುಧವಾರದಿಂದ ಮಳೆ ಹೆಚ್ಚಾಗಿ ಅಬ್ಬರಿಸುವ ಸಾಧ್ಯತೆಯಿದೆ. ಮೂರು ದಿನ ಸಂಜೆ ಹೊತ್ತಿಗೆ ಮಳೆಸುರಿಯುವುದರಿಂದ ಕಚೇರಿಯಿಂದ ಹೊರಬರುವ ಸಮಯವಿದಾಗಿದ್ದು, ಮರ ಬೀಳುವ ವಿದ್ಯುತ್ ಕಂಬ ಬೀಳುವ ಸಂಭವವಿದೆ. ಚರಂಡಿ, ರಸ್ತೆ ಗುಂಡಿಯಿಂದ ರಕ್ಷಿಸಿಕೊಳ್ಳುವಂತೆ ಮಳೆಯಲ್ಲಿ ಓಡಾಡದಂತೆ ಎಚ್ಚರಿಕೆಯಿಂದಿರಲು ಹೇಳಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 