ಮಳೆ ಅನಾಹುತ: ಕರಾವಳಿ ಜಿಲ್ಲೆಗಳಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ತಂಡ
ಮಂಗಳೂರು, ಜೂನ್ 2, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು,ಪರಿಣಾಮ ಕರಾವಳಿ ಭಾಗದಲ್ಲಿ ಎರಡು ದಿನಗಳ ಭಾರಿ, ಬಿರುಗಾಳಿ, ಮಳೆಯಾಗಲಿದ್ದು, ಮುಂದಿನ ಅನಾಹುತ ತಡೆಗೆ ತಡೆಗೆ ರಾಷ್ಟ್ರೀಯ ವಿಪತ್ತು ಪರಿಹಾರ ತಂಡ ಇದೆ 4ರಂದು ಜಿಲ್ಲೆಗೆ ಆಗಮಿಸಲಿದೆ. ಹೀಗಾಗಿ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ ಕರಾವಳಿ ಜಿಲ್ಲೆಗಳಲ್ಲಿ ಇಂದು 115.6 ಮಿ.ಮೀ.ನಿಂದ 204.4 ಮಿ.ಮೀ.ಮಳೆಯಾಗಲಿದೆ, ಈ ವೇಳೆ ಗುಡುಗು ಮತ್ತು ಗಾಳಿ ಕೂಡ ಬಿರುಸುಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಮೀನುಗಾರಿಕೆಗೆ ನಿಷೇದಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಪ್ರಕೃತಿ ವಿಕೋಪವನ್ನು ಸಮರ್ಪಕವಾಗಿ ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ತಂಡ ಬರಲಿದೆ. ಕೇರಳಕ್ಕೆ ಮುಂಗಾರು ಜೂನ್ ಒಂದರಂದು ಪ್ರವೇಶಿಸಿದ್ದು, ಈ ಚಂಡಮಾರುತದ ಪರಿಣಾಮ ಕರಾವಳಿಯ ಮೇಲೂ ಬೀರಲಿದೆ ಎನ್ನಲಾಗಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 