ನಾಳೆಯಿಂದ ಮಳೆ ನೀರು ಕೊಯ್ಲು ಜಾಗೃತಿ ಕಾರ್ಯಕ್ರಮ

ನಾಳೆಯಿಂದ ಮಳೆ ನೀರು ಕೊಯ್ಲು ಜಾಗೃತಿ ಕಾರ್ಯಕ್ರಮ  Rainwater harvesting awareness program from tomorrow


ಬೆಳಗಾವಿ 07:  ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಸಂಸ್ಥೆ,  ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಹಾಗೂ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಇವರುಗಳ ಸಯುಕ್ತ ಆಶ್ರಯದಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರುಗಳಿಗೆ ಒಂದು ದಿನದ ನವೀಕರಿಸಬಹುದಾದ ಇಂಧನಗಳ ಕುರಿತು ತರಬೇತಿ ಕಾರ್ಯಕ್ರಮ ಸೋಮವಾರ ದಿಂದ 3 ದಿನಗಳ ಕಾಲ ಜರುಗಲಿದೆ. ದಿ 9 ರಂದು ಉಚಗಂವ ಭಾಗದ ಬಸೂರ್ತಿಯಲ್ಲಿ ದಿ 10 ಬೆಳಗುಂದಿ ಗ್ರಾಮದಲ್ಲಿ ಹಾಗೂ ದಿ 11 ರಂದು  ಜುಮ್ಮನಾಳದಲ್ಲಿ  ಆಯೋಜಿಸಲಾಗಿದೆ. ತರಬೇತಿ ಅವಧಿಯಲ್ಲಿ ಘಟ್ಟಿ ಕಸ ನಿರ್ವಹಣೆ , ಮಳೆ ನೀರು ಕೊಯ್ಲು, ಪರಿಸರ ಸಂರಕ್ಷಣೆ ನವೀಕರಿಸಬಹುದಾದ ಇಂಧನಗಳ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದಾರೆ ಎಂದು ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.