ನೀವಿರುವಲ್ಲೇ ಜಾಗೃತಿ ಮೂಡಿಸಿ - ಜಿಲ್ಲಾಧಿಕಾರಿ: ನನ್ನನ್ನು ಯಾರೂ ಪ್ರಶ್ನಿಸುವಂತಿಲ್ಲ ರೇಣುಕಾಚಾರ್ಯ
ದಾವಣಗೆರೆ, ಮಾ.29, ಕಳೆದೆರಡು ದಿನಗಳಿಂದ ದಾವಣಗೆರೆ ಮತ್ತು ಮತಕ್ಷೇತ್ರ ಹೊನ್ನಾಳಿಯಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕೊರೋನಾ ವೈರಸ್ ನಿಯಂತ್ರಣ ಕುರಿತ ಜಾಗೃತಿಗಾಗಿ ಓಡಾಡುತ್ತಿದ್ದು, ಅವರ ಹಿಂದೆ ಬೆಂಬಲಿಗರು ಕಾರ್ಯಕರ್ತರ ಪಡೆಯೇ ತಿರುಗುತ್ತಿದೆ.ಸಾಮಾಜಿಕ ಅಂತರದ ಬಗ್ಗೆ ಪಾಠ ಹೇಳುವ ರೇಣುಕಾಚಾರ್ಯರ ಹಿಂಬಾಲಿಕರು ಮಾತ್ರ ದಂಡುದಂಡಾಗಿ ರಸ್ತೆಗಳಿಗೆ ಲಗ್ಗೆ ಇಡುತ್ತಿದ್ದಾರೆ. ಇದನ್ನು ಗಮನಿಸಿದ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಶಾಸಕ ರೇಣುಕಾಚಾರ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಪ್ರಚಾರಕ್ಕಾಗಿ ಓಡಾಡುವುದನ್ನು ನಿಲ್ಲಿಸುವಂತೆ ಸೂಚಿಸಿರುವ ಜಿಲ್ಲಾಧಿಕಾರಿಗಳು, ಶಾಸಕರ ಜತೆ ಹಲವಾರು ಜನರಿದ್ದ ಕಾರಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನೀವಿರುವ ಜಾಗದಲ್ಲೇ ಮಾಡಿ ಎಂದು ಸಲಹೆ ನೀಡಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ರೇಣುಕಾಚಾರ್ಯ, ನಾನು ಜನಪ್ರತಿನಿಧಿ. ಅಲ್ಲಿ ಹೋಗಬೇಡ, ಇಲ್ಲಿ ಹೋಗಬೇಡ ಎಂದು ಯಾರೂ ಹೇಳುವಂತಿಲ್ಲ. ನನ್ನನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ.ಸಂಸದರ ಮನೆಗೆ ನಾನು, ಮೇಯರ್ ಹೋಗಿದ್ದೇವೆ. 10 ಅಡಿ ದೂರ ನಿಂತು ಆರೋಗ್ಯ ವಿಚಾರಿಸಿದೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.ಇನ್ನು ಮೇಯರ್ ಬಿ.ಜಿ. ಅಜಯ ಕುಮಾರ್ ಮಾತನಾಡಿ, ರೇಣುಚಾರ್ಯ ಅವರು ಮುಖ್ಯಮಂತ್ರಿಗಳ ಕಾರ್ಯದರ್ಶಿ. ಅವರು ರಾಜ್ಯದ ಎಲ್ಲಕಡೆ ಹೋಗಬಹುದು ಎಂದು ಸಮರ್ಥಿಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 