ಗುಜ್ಜರ್ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿ ನೀಡಿದ ರಾಜಸ್ಥಾನ
ಗುಜ್ಜರ್ ಸಮುದಾಯ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿಗೆ ಅನುಮೋದನೆ ನೀಡಿದೆ.
ಜೈಪುರ 02: ಅತೀ ಹಿಂದುಳಿದ ವರ್ಗಗಳ ಕೆಟಗರಿಯಡಿ ರಾಜಸ್ಥಾನ ಸರಕಾರ ಇಂದು ಸೋಮವಾರ ಗುಜ್ಜರ್ ಸಮುದಾಯ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿಗೆ ಅನುಮೋದನೆ ನೀಡಿದೆ.
ಇದೇ ಜುಲೈ 7ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜೈಪುರ ರಾಲಿ ನಡೆಯುವುದಕ್ಕೆ ಪೂರ್ವಭಾವಿ ಎಂಬಂತೆ ಈ ಮೀಸಲಾತಿಯನ್ನು ರಾಜಸ್ಥಾನ ಸರಕಾರ ಪ್ರಕಟಿಸಿದೆ.
ಪ್ರಧಾನಿ ಮೋದಿ ಅವರ ರಾಲಿ ನಡೆಯುವ ತಾಣದಲ್ಲೇ ತಾವು ಮೀಸಲಾತಿಯನ್ನು ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಗುಜ್ಜರ್ ಸಮುದಾಯದವರು ಈ ಮೊದಲು ಬೆದರಿಕೆ ಹಾಕಿದ್ದರು.
ಪ್ರಧಾನಿ ಮೋದಿ ಅವರು ತಮ್ಮ ರಾಲಿ ನಡೆಯುವ ತಾಣದಲ್ಲೇ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಭೇಟಿಯಾಗುವರು.
ಶೇ. 1ರ ಮೀಸಲಾತಿಯ ಲಾಭ ಪಡೆಯುವ ಸಮುದಾಯಗಳೆಂದರೆ ಗೋದಿಯಾ ಲೋಹರ್, ಬಂಜಾರಾ, ಗುಜ್ಜರ್, ರೈಕಾ ಮತ್ತು ಗಡಾರಿಯಾ.
ಈ ಸಮುದಾಯಗಳಿಗೆ ಶೇ.1ರ ಮೀಸಲಾತಿಯನ್ನು ಕಲ್ಪಿಸುವ ದಿಶೆಯಲ್ಲಿ ಸರಕಾರ ಎರಡು ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಮೊದಲನೇಯದು ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಕ್ಕೆ ಸಂಬಂಧಿಸಿದ ಮೀಸಲಾತಿ. ಎರಡನೇದು ಸರಕಾರಿ ಉದ್ಯೋಗಗಳಲ್ಲಿನ ಮೀಸಲಾತಿ
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 