ಗುಜ್ಜರ್ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿ ನೀಡಿದ ರಾಜಸ್ಥಾನ
ಗುಜ್ಜರ್ ಸಮುದಾಯ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿಗೆ ಅನುಮೋದನೆ ನೀಡಿದೆ.
ಜೈಪುರ 02: ಅತೀ ಹಿಂದುಳಿದ ವರ್ಗಗಳ ಕೆಟಗರಿಯಡಿ ರಾಜಸ್ಥಾನ ಸರಕಾರ ಇಂದು ಸೋಮವಾರ ಗುಜ್ಜರ್ ಸಮುದಾಯ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿಗೆ ಅನುಮೋದನೆ ನೀಡಿದೆ.
ಇದೇ ಜುಲೈ 7ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜೈಪುರ ರಾಲಿ ನಡೆಯುವುದಕ್ಕೆ ಪೂರ್ವಭಾವಿ ಎಂಬಂತೆ ಈ ಮೀಸಲಾತಿಯನ್ನು ರಾಜಸ್ಥಾನ ಸರಕಾರ ಪ್ರಕಟಿಸಿದೆ.
ಪ್ರಧಾನಿ ಮೋದಿ ಅವರ ರಾಲಿ ನಡೆಯುವ ತಾಣದಲ್ಲೇ ತಾವು ಮೀಸಲಾತಿಯನ್ನು ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಗುಜ್ಜರ್ ಸಮುದಾಯದವರು ಈ ಮೊದಲು ಬೆದರಿಕೆ ಹಾಕಿದ್ದರು.
ಪ್ರಧಾನಿ ಮೋದಿ ಅವರು ತಮ್ಮ ರಾಲಿ ನಡೆಯುವ ತಾಣದಲ್ಲೇ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಭೇಟಿಯಾಗುವರು.
ಶೇ. 1ರ ಮೀಸಲಾತಿಯ ಲಾಭ ಪಡೆಯುವ ಸಮುದಾಯಗಳೆಂದರೆ ಗೋದಿಯಾ ಲೋಹರ್, ಬಂಜಾರಾ, ಗುಜ್ಜರ್, ರೈಕಾ ಮತ್ತು ಗಡಾರಿಯಾ.
ಈ ಸಮುದಾಯಗಳಿಗೆ ಶೇ.1ರ ಮೀಸಲಾತಿಯನ್ನು ಕಲ್ಪಿಸುವ ದಿಶೆಯಲ್ಲಿ ಸರಕಾರ ಎರಡು ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಮೊದಲನೇಯದು ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಕ್ಕೆ ಸಂಬಂಧಿಸಿದ ಮೀಸಲಾತಿ. ಎರಡನೇದು ಸರಕಾರಿ ಉದ್ಯೋಗಗಳಲ್ಲಿನ ಮೀಸಲಾತಿ
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 