ಗುಜ್ಜರ್ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿ ನೀಡಿದ ರಾಜಸ್ಥಾನ
ಗುಜ್ಜರ್ ಸಮುದಾಯ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿಗೆ ಅನುಮೋದನೆ ನೀಡಿದೆ.
ಜೈಪುರ 02: ಅತೀ ಹಿಂದುಳಿದ ವರ್ಗಗಳ ಕೆಟಗರಿಯಡಿ ರಾಜಸ್ಥಾನ ಸರಕಾರ ಇಂದು ಸೋಮವಾರ ಗುಜ್ಜರ್ ಸಮುದಾಯ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿಗೆ ಅನುಮೋದನೆ ನೀಡಿದೆ.
ಇದೇ ಜುಲೈ 7ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜೈಪುರ ರಾಲಿ ನಡೆಯುವುದಕ್ಕೆ ಪೂರ್ವಭಾವಿ ಎಂಬಂತೆ ಈ ಮೀಸಲಾತಿಯನ್ನು ರಾಜಸ್ಥಾನ ಸರಕಾರ ಪ್ರಕಟಿಸಿದೆ.
ಪ್ರಧಾನಿ ಮೋದಿ ಅವರ ರಾಲಿ ನಡೆಯುವ ತಾಣದಲ್ಲೇ ತಾವು ಮೀಸಲಾತಿಯನ್ನು ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಗುಜ್ಜರ್ ಸಮುದಾಯದವರು ಈ ಮೊದಲು ಬೆದರಿಕೆ ಹಾಕಿದ್ದರು.
ಪ್ರಧಾನಿ ಮೋದಿ ಅವರು ತಮ್ಮ ರಾಲಿ ನಡೆಯುವ ತಾಣದಲ್ಲೇ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಭೇಟಿಯಾಗುವರು.
ಶೇ. 1ರ ಮೀಸಲಾತಿಯ ಲಾಭ ಪಡೆಯುವ ಸಮುದಾಯಗಳೆಂದರೆ ಗೋದಿಯಾ ಲೋಹರ್, ಬಂಜಾರಾ, ಗುಜ್ಜರ್, ರೈಕಾ ಮತ್ತು ಗಡಾರಿಯಾ.
ಈ ಸಮುದಾಯಗಳಿಗೆ ಶೇ.1ರ ಮೀಸಲಾತಿಯನ್ನು ಕಲ್ಪಿಸುವ ದಿಶೆಯಲ್ಲಿ ಸರಕಾರ ಎರಡು ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಮೊದಲನೇಯದು ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಕ್ಕೆ ಸಂಬಂಧಿಸಿದ ಮೀಸಲಾತಿ. ಎರಡನೇದು ಸರಕಾರಿ ಉದ್ಯೋಗಗಳಲ್ಲಿನ ಮೀಸಲಾತಿ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 