ದೇಶದ 8 ರಾಜ್ಯಗಳಲ್ಲಿ ರಾಜ್ಯಸಭಾ ಚುನಾವಣೆ: ಸಂಜೆಯೇ ಫಲಿತಾಂಶ
ನವದೆಹಲಿ, ಜೂನ್19, ದೇಶದ 8 ರಾಜ್ಯಗಳಲ್ಲಿ ರಾಜ್ಯಸಭೆಯ 19 ಸ್ಥಾನಗಳಿಗೆ ಶುಕ್ರವಾರ (ಇಂದು ) ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ ಯಿಂದಲೇ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ಮಾರ್ಚ್ ನಲ್ಲಿ ನಡೆಯಬೇಕಾಗಿದ್ದ ಚುನಾವಣೆಯನ್ನು ಕೊರೋನಾ ಸೋಂಕಿನ ಕಾರಣ ಮುಂದೂಡಲಾಗಿತ್ತು. ಕರ್ನಾಟಕದಿಂದ 4 ಹಾಗೂ ಅರುಣಾಚಲಪ್ರದೇಶದ ಒಂದು ಸ್ಥಾನಕ್ಕೆ ಈಗಾಗಲೇ ಅವಿರೋಧ ಆಯ್ಕೆಯಾಗಿದೆ. ಕರ್ನಾಟಕದಿಂದ ಬಿಜೆಪಿಯಿಂದ ಈರಣ್ಣ ಕಡಾಡಿ, ಅಶೋಕ್ ಗಸ್ತಿ, ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್ನಿಂದ ಎಚ್ .ಡಿ . ದೇವೇಗೌಡ ಆಯ್ಕೆಯಾಗಿದ್ದಾರೆ. ಅರುಣಾಚಲಪ್ರದೇಶದಲ್ಲಿ ನಬಾಮ್ ರೆಬಿಯಾ ಬಿಜೆಪಿಯಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇಂದು ಚುನಾವಣೆ ನಡೆಯಲಿರುವ ಮಧ್ಯಪ್ರದೇಶ, ರಾಜಸ್ತಾನ, ಗುಜರಾತ್ ಹಾಗೂ ಉಳಿದ ಎಂಟು ರಾಜ್ಯಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಮಣಿಪುರದಲ್ಲಿ ಆಡಳಿತಾರೂಢ ಬಿಜೆಪಿಗೆ ಕೆಲ ಶಾಸಕರು ರಾಜೀನಾಮೆ ನೀಡಿರುವುದು ಚುನಾವಣಾ ಕಣ ಮತ್ತಷ್ಟು ರಂಗೇರುವಂತೆ ಮಾಡಿದೆ, ಸಂಜೆಯೆ ಅಧಿಕೃತ ಫಲಿತಾಂಶ ಪ್ರಕಟವಾಗಲಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 