ರಾಜ್ಯಸಭಾ ಚುನಾವಣೆ ಮುಂದೂಡಿಕೆ
ನವದೆಹಲಿ,ಮಾ ೨೪, ಕಾಳ್ಗಿಚ್ಚಿನಂತೆ ವ್ಯಾಪಿಸುತ್ತಿರುವ ಕೊರೊನಾ ಸೋಂಕು ನಿಯಂತ್ರಿಸುವ ಕ್ರಮವಾಗಿ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಬಹುತೇಕ ರಾಜ್ಯಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ಇದೇ ೨೬ ರಂದು ನಡೆಯಬೇಕಿದ್ದ ರಾಜ್ಯಸಭಾ ಚುನಾವಣೆಗಳನ್ನು ಕೇಂದ್ರ ಚುನಾವಣಾ ಆಯೋಗ ಮುಂದೂಡಲು ನಿರ್ಧರಿಸಿದೆ.
ಚುನಾವಣಾ ಆಯೋಗ ಘೋಷಿಸಿದಂತೆ ಮಾರ್ಚ್ ೨೬ ರಂದು ರಾಜ್ಯಸಭಾ ಚುನಾವಣೆ ನಡೆಯಬೇಕಿತ್ತು. ರಾಷ್ಟ್ರ ರಾಜಧಾನಿ ದೆಹಲಿ ಸೇರಿದ ದೇಶದ ಬಹುತೇಕ ರಾಜ್ಯಗಳಲ್ಲಿ ಮಾರ್ಚ್ ೩೧ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.ಕಾಂಗ್ರೆಸ್ ತೊರೆದು ಇತ್ತೀಚಿಗೆ ಬಿಜೆಪಿ ಸೇರಿದ್ದ ಮಧ್ಯಪ್ರದೇಶ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕೇಸರಿ ಪಕ್ಷ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯನ್ನಾಗಿಸಿದೆ.
ಸಂಸತ್ತಿನ ಮೇಲ್ಮನೆಯ ೫೫ ಸ್ಥಾನಗಳಿಗೆ ಮಾರ್ಚ್ ೨೬ ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಈಗಾಗಲೇ ಚುನಾವಣೆಯಿಲ್ಲದೆ ೩೭ ಅಭ್ಯರ್ಥಿಗಳು ಅವಿರೋಧವಾಗಿ ಚುನಾಯಿತರಾಗಿದ್ದಾರೆ.ಉಳಿದ ೧೮ ಸ್ಥಾನಗಳಿಗೆ ಪರಿಸ್ಥಿತಿ ನೋಡಿಕೊಂಡು ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ೫೦೦ಕ್ಕೆ ಏರಿಕೆಯಾಗಿವೆ ಕೇಂದ್ರ ಆರೋಗ್ಯ ಸಚಿವಾಲಯ ಅಧಿಕೃತವಾಗಿ ತಿಳಿಸಿದೆ.ದೇಶದಲ್ಲಿ ಸೋಂಕು ಕಾಳ್ಗಿಚ್ಚಿನಂತೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ದೇಶದ ಬಹುತೇಕ ಪ್ರದೇಶಗಳನ್ನು ಸರ್ಕಾರ ಲಾಕ್ ಡೌನ್ ಮಾಡಿದ್ದು, ಜನರು ಒಂದಡೆ ಸೇರುವುದನ್ನು ನಿಷೇಧಿಸಿ, ಮಾ ೩೧ರವರೆಗೆ ರಸ್ತೆ, ರೈಲು ಹಾಗೂ ವಿಮಾನ ಸಂಚಾರವನ್ನು ರದ್ದುಪಡಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 