ರಾಜ್ಯಸಭೆ ಆಯ್ಕೆ ತಕರಾರು: ಸುಪ್ರೀಂ ಕೋರ್ಟ್ನಲ್ಲಿ ಕೇವಿಯೆಟ್ ಹಾಕಿದ ಜೈಶಂಕರ್
ನವದೆಹಲಿ, ಫೆ 12: ಕಳೆದ ಜುಲೈನಲ್ಲಿ ಗುಜರಾತ್ನಿಂದ ರಾಜ್ಯಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಸಲ್ಲಿಸಿದ ಯಾವುದೇ ಅರ್ಜಿಯನ್ನು ವಿಚಾರಣೆಗೆ ನ್ಯಾಯಾಲಯ ನಿರ್ಧರಿಸಿದರೆ ತಮ್ಮ ಅಭಿಪ್ರಾಯ ಅಹವಾಲು ಕೇಳದೆ ಯಾವ ತೀರ್ಮಾನಕ್ಕೆ ಬರಬಾರದು ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ಕೇವಿಯೆಟ್ ಹಾಕಿದ್ದಾರೆ.
ಮಾಜಿ ವಿದೇಶಾಂಗ ಕಾರ್ಯದರ್ಶಿ ಅವರು ಗುಜರಾತ್ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಬಹುದಾದ ಮನವಿಗಳ ಕುರಿತು ನ್ಯಾಯಾಲಯವು ಯಾವುದೇ ನಿರ್ದೇಶನಗಳನ್ನು ನೀಡುವ ಮೊದಲು ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಲಾಗಿದೆ.
ಡಾ.ಜೈಶಂಕರ್ ಅವರ ಚುನಾವಣೆ ಆಯ್ಕೆ ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಗೌರವ್ ಪಾಂಡ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು 2020 ರ ಫೆಬ್ರವರಿ 4 ರಂದು ಗುಜರಾತ್ ಹೈಕೋರ್ಟ್ ವಜಾಗೊಳಿಸಿ ಅರ್ಜಿಯಲ್ಲಿ ಯಾವುದೇ ಅರ್ಹತೆ ಇಲ್ಲ ಎಂದು ತಿಳಿಸಿತ್ತು.
ಸುಪ್ರೀಂ ಕೋರ್ಟ್ನಲ್ಲಿ ರಾಜ್ಯಸಭೆ ಸ್ಥಾನಗಳಿಗೆ ಪ್ರತ್ಯೇಕ ಮತದಾನ ನಡೆಸುವ ಆಯೋಗದ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನಿಸಿ ಚುನಾವಣೆಗಳನ್ನು ಒಟ್ಟಾಗಿ ನಡೆಸಬೇಕೆಂದು ಮನವಿ ಮಾಡಿತ್ತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 