ಮಂಗಳಮುಖಿಯರಿಂದ ಬೈಕ್ ಸವಾರರಿಗೆ ರಾಖಿ ಕಟ್ಟಿ ಜಾಗೃತಿ
ಲೋಕದರ್ಶನ ವರದಿ
ಕೊಪ್ಪಳ 06: ಜಿಲ್ಲಾ ಕೇಂದ್ರ ಕೊಪ್ಪಳದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಹೊರಗಡೆ ಸುತ್ತಾಡುವ ಬೈಕ್ ಸವಾರರಿಗೆ ಸೋಮವಾರದಂದು ಮಂಗಳ ಮುಖಿಯರು ರಾಖಿ ಕಟ್ಟಿ ಜಾಗೃತಿ ಮೂಡಿಸಿ ಅನಾವಶ್ಯಕವಾಗಿ ಬೈಕ್ ಮೇಲೆ ತೆರಳುವ ಯುವಕರ ಹಣೆಗೆ ತಿಲಕವಿಟ್ಟು, ಕೈಗೆ ರಾಖಿ ಕಟ್ಟಿ ಹೊರಗೆ ಬರದಂತೆ ಮನವಿ ಮಾಡುತ್ತಿದ್ದಾರೆ.
ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಆದರೂ, ಜನರು ಸಾರ್ವಜನಿಕವಾಗಿ, ಗುಂಪಿನಲ್ಲಿ ಓಡಾಡುವುದನ್ನು ಬಿಟ್ಟಿಲ್ಲ. ಬೈಕ್ ಸವಾರರು ಅನಾವಶ್ಯಕವಾಗಿ ಬೀದಿಗಿಳಿಯುತ್ತಿದ್ದಾರೆ. ಬೈಕ್ ಮೇಲೆ ತೆರಳುವ ಯುವಕರಿಗೆ ಇದೀಗ ಮಂಗಳಮುಖಿಯರು, 'ಬೈಕ್ ನಲ್ಲಿ ಓಡಾಡಬೇಡಿ ಅಣ್ಣಾಂದಿರ, ಕೊರೊನಾ ವೈರಸ್ ಹರಡದಂತೆ ತಡೆಯಲು ಎಚ್ಚರ ವಹಿಸಿ' ಎಂದು ಮನವಿ ಮಾಡುತ್ತಾ ಜಾಗೃತಿ ಮೂಡಿಸುತ್ತಿದ್ದಾರೆ.
ನಗರದ ಅಶೋಕ ವೃತ್ತದಲ್ಲಿ ಮಂಗಳಮುಖಿಯರು ಬೈಕ್ ಸವಾರರಿಗೆ ಜಾಗೃತಿಯನ್ನು ಮೂಡಿಸುತ್ತಿದ್ದು, ಅನಾವಶ್ಯಕವಾಗಿ ಬೈಕ್ ಮೇಲೆ ತೆರಳುವ ಯುವಕರ ಹಣೆಗೆ ತಿಲಕವಿಟ್ಟು , ಕೈಗೆ ರಾಖಿ ಕಟ್ಟಿ ಹೊರಗೆ ಬರದಂತೆ ಮನವಿ ಮಾಡುತ್ತಿದ್ದಾರೆ.ಅಣ್ಣಾ, ಕೊರೊನಾ ವೈರಸ್ ಸೋಂಕು ಹರಡುತ್ತದೆ. ನೀವು ಮನೆಯಲ್ಲಿಯೇ ಕುಳಿತು ರೋಗ ಹರಡಂತೆ ತಡೆಗಟ್ಟಬೇಕು ಎಂದು ಬೈಕ್ ಸವಾರರಿಗೆ ಮಂಗಳ ಮುಖಿಯರು ಜಾಗೃತಿ ಮೂಡಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಡಿವೈಎಸ್ಪಿ ವೆಂಕಟಪ್ಪ ನಾಯಕ, ಪಿಐ ಮೌನೇಶ್ವರ ಪಾಟೀಲ್ ಪೋಲೀಸ್ ಸಿಬ್ಬಂದಿಗಳು ಅವರಿಂದಲೂ ಸಹ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 