ಅಂಕಲಿ ಬ್ರಹ್ಮಕುಮಾರಿ ಕೇಂದ್ರದಲ್ಲಿ ರಕ್ಷಾ ಬಂಧನ ಸಂಭ್ರಮ
Raksha Bandhan celebrations at the Ankali Brahma Kumari Centre
ಲೋಕದರ್ಶನ ವರದಿ
ಮಾಂಜರಿ 27: ಸಮೀಪದ ಅಂಕಲಿ ಗ್ರಾಮದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕೇಂದ್ರದಲ್ಲಿ ರಕ್ಷಾ ಬಂಧನ ಮಹೋತ್ಸವವನ್ನು ಅತ್ಯಂತ ಸಡಗರ ಹಾಗೂ ಭಕ್ತಿಭಾವದಿಂದ ಗುರುವಾರ ದಿ. 27ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರದ ಬಿ.ಕೆ. ಆರತಿ ಹಾಗೂ ಬಿ.ಕೆ. ಸವಿತಾ ಅವರು ಆಗಮಿಸಿದ್ದ ಸಹೋದರ-ಸಹೋದರಿಯರಿಗೆ ರಾಖಿ ಕಟ್ಟಿ, ಸಿಹಿ ಹಂಚುವ ಮೂಲಕ ಹಬ್ಬದ ಶುಭಾಶಯ ಕೋರಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಕೆ. ಆರತಿ ಅವರು ರಕ್ಷಾ ಬಂಧನವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ತರುವ ಪವಿತ್ರ ಹಬ್ಬವಾಗಿದೆ. ಪ್ರತಿಯೊಬ್ಬರೂ ತಮ್ಮ ಮನಸ್ಸು, ವಚನ ಮತ್ತು ಕರ್ಮಗಳಲ್ಲಿ ಶುದ್ಧತೆ ಹಾಗೂ ಪವಿತ್ರತೆಯನ್ನು ಅಳವಡಿಸಿಕೊಳ್ಳಬೇಕು. ಮೌಲ್ಯಾಧಾರಿತ ಜೀವನ ನಡೆಸುವ ಮೂಲಕ ನಮ್ಮ ಭಾರತ ಭೂಮಿಯನ್ನು ಸ್ವರ್ಗ ಭೂಮಿಯನ್ನಾಗಿ ಪರಿವರ್ತಿಸಲು ಶ್ರಮಿಸೋಣ ಎಂದು ಕರೆ ನೀಡಿದರು.
ಬಳಿಕ ಮಾತನಾಡಿದ ಬಿ.ಕೆ. ಸವಿತಾ ಅವರು ಈ ಪವಿತ್ರ ದಿನದಂದು ಪ್ರತಿಯೊಬ್ಬರ ಮೇಲೆಯೂ ನಿರಾಕಾರ ಶಿವಬಾಬಾರ ಅಭಯ ಹಸ್ತ ಮತ್ತು ರಕ್ಷಣೆ ಸದಾ ಇರಲಿ ಎಂದು ಶುಭ ಹಾರೈಸಿದರು. ಬ್ರಹ್ಮಕುಮಾರಿ ವಿಶ್ವವಿದ್ಯಾಲಯದಲ್ಲಿ ಸುದೀರ್ಘ ಹಾಗೂ ಅಮೂಲ್ಯವಾದ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಮನೋಹರ ತೋರಸೆ ಮತ್ತು ಪೋಪಟ ಪವಾರ ಅವರನ್ನು ಸಂಸ್ಥೆಯ ವತಿಯಿಂದ ಶಾಲಾ ಹೊದಿಸಿ, ಗೌರವಿಸಿ ಸನ್ಮಾನಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 