ರಂಜಾನ್: ಮಸೀದಿಗಳಲ್ಲಿ ನಮಾಜ್ಗೆ ಅವಕಾಶವಿಲ್ಲ: ಡಿವೈಎಸ್ ರಾಮರಾವ್
ಬಳ್ಳಾರಿ,ಏ.22: ಕೊರೋನಾ ವೈರಸ್ ಭೀತಿ ಹಿನ್ನಲೆ, ಈ ಬಾರಿ ರಂಜಾನ್ ಆಚರಣೆ ವೇಳೆ ಸಾಮೂಹಿಕ ಪ್ರಾರ್ಥನೆ ಮತ್ತು ಮಸೀದಿಗಳಲ್ಲಿ ನಮಾಜ್ಗೆ ಅವಕಾಶವಿಲ್ಲ, ಅವರವರ ಮನೆಗಳಲ್ಲೇ ಹಬ್ಬ ಆಚರಣೆ ಮಾಡಿ, ಸರಕಾರ ಜಾರಿ ಮಾಡಿರುವ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಂದಾಗಬೇಕೆಂದು ಬಳ್ಳಾರಿ ನಗರ ವಿಭಾಗದ ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಕೆ.ರಾಮಾರಾವ್ ಅವರು ಹೇಳಿದರು.
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ರಂಜಾನ್ ಆಚರಣೆ ಸಂಬಂಧ ಮಂಗಳವಾರ ಬಳ್ಳಾರಿಯ ಸುಧಾಕ್ರಾಸ್ ಬಳಿಯ ಕೌಲ್ ಬಜಾರ್ ಔಟ್ ಪೋಸ್ಟ್ ಪೊಲೀಸ್ ಠಾಣೆಯಲ್ಲಿ ಕರೆದಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಕೊರೋನಾ ವೈರಸ್ ಸದ್ಯ ಅಪಾಯಕಾರಿಯಾಗಿದೆ.
ಸದ್ಯ ಯಾವುದೇ ರೀತಿಯ ಬಹಿರಂಗ ಅಚರಣೆ, ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಈ ಸಂಬಂಧ ಸರಕಾರದಿಂದ ಬರೋ ಮಾರ್ಗಸೂಚಿಗಳನ್ನು ತಮ್ಮ ಗಮನಕ್ಕೆ ತರಲಾಗುತ್ತದೆ ಎಂದು ಹೇಳಿದರು.
ಬಳ್ಳಾರಿ ತಹಸೀಲ್ದಾರ್ ನಾಗರಾಜ್ ಮಾತನಾಡಿ, ಕೊರೋನಾ ವೈರಸ್ ಒಂದು ಸಾಂಕ್ರಾಮಿಕ ರೋಗ, ಅದು ಗಾಳಿಯಲ್ಲಿ ಹರಡುವ ರೋಗ ಹಾಗಾಗಿ, ರಂಜಾನ್ ಹಬ್ಬವನ್ನು ತಮ್ಮ ಮನೆಗಳಲ್ಲಿ ಆಚರಿಸಿಕೊಳ್ಳಬೇಕು.
ಯಾವುದೇ ಕಾರಣಕ್ಕೂ ಹೊರ ಬಾರದೇ, ಮಸೀದಿಗಳಲ್ಲಿ ಗುಂಪು ಗುಂಪಾಗಿ ಸೇರಿ ಹಬ್ಬ ಆಚರಣೆ ಮಾಡಲು, ಪ್ರಾರ್ಥನೆ ಮಾಡಲು ಅವಕಾಶವಿಲ್ಲ. ಈ ರೋಗವನ್ನು ಸಾಮಾಜಿಕ ಅಂತರ ಕಾಪಡಿಕೊಂಡೇ ಓಡಿಸಬೇಕೇ ಹೊರತು ಬೇರೆಯಾವುದು ಔಷಧಿ ಇಲ್ಲಾ. ತಮ್ಮ ಕುಟುಂಬದ ಉಳಿವಿಗಾಗಿ ಸರಕಾರದ ನಿಯಮ ಪಾಲನೆ ಮಾಡಿ, ಬಳ್ಳಾರಿ ಜಿಲ್ಲಾಡಳಿತಕ್ಕೆ ಸ್ಪಂದಿಸಿ ಎಂದು ಮನವಿ ಮಾಡಿದರು.
ಇನ್ನೂ ಮುಸ್ಲಿಂ ಸಮುದಾಯದ ಖಾಜಿಯೂ ಸಹ ಸರಕಾರದ ನಿಯಮ ಪಾಲನೆ ಮಾಡುತ್ತೇವೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಿಪಿಐಗಳಾದ ಗಾಯತ್ರಿ, ಸುಭಾಷ್, ನಾಗರಾಜ್, ಟ್ರಾಫಿಕ್ ಸಿಪಿಐ ನಾಗರಾಜ್ ಪಿಎಸ್ಐಗಳಾದ ರಘು ಕುಮಾರ್, ಶ್ರೀಶೈಲ, ಸೌಮ್ಯ ಸೇರಿದಂತೆ ಪೊಲೀಸ್ ಸಿಬ್ಬಂದಿ ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 