ಈದ್ಗಾ ಮೈದಾನದಲ್ಲಿ ಸಡಗರ ಸಂಭ್ರಮದಿಂದ ರಂಜಾನ್ ಹಬ್ಬ ಆಚರಣೆ
Ramadan celebrated with great enthusiasm at Eidgah Grounds
ಈದ್ಗಾ ಮೈದಾನದಲ್ಲಿ ಸಡಗರ ಸಂಭ್ರಮದಿಂದ ರಂಜಾನ್ ಹಬ್ಬ ಆಚರಣೆ
ಕಂಪ್ಲಿ 31: ಪಟ್ಟಣದಲ್ಲಿ ಮುಸ್ಲಿಂ ಸಮಾಜ ಭಾಂದವರು ಸೋಮವಾರ ಸಡಗರ ಸಂಭ್ರಮದಿಂದ ರಂಜಾನ್ ಆಚರಿಸಿದರು.ಇಲ್ಲಿನ ಹೊಸ ಬಸ್ ನಿಲ್ದಾಣ ಬಳಿಯ ಮುದ್ದಾಪುರ ಅಗಸಿಯ ಖದೀಮ್ ಈದ್ಗಾ(ಸುನ್ನಿ) ಮೈದಾನದಲ್ಲಿ ಸೇರಿದ ಮುಸ್ಲಿಮರು ಧರ್ಮಗುರು ಸೈಯದ್ ಷಾ ಅಬುಲ್ ಹಸನ್ ಖಾದ್ರಿ ನೇತೃತ್ವದಲ್ಲಿ ಶ್ರದ್ದಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಲಾಯಿತು.
ನಂತರ ಪರಸ್ಪರ ಹಬ್ಬದ ಶುಭಾಶಯ ವಿನಿಮಯಾ ಮಾಡಿಕೊಂಡರು ಮುಸ್ಲಿಂ ಧರ್ಮಗುರು ಸೈಯದ್ ಷಾ ಅಬುಲ್ ಹಸನ್ ಖಾದ್ರಿ ಮಾತನಾಡಿ, ಪ್ರತಿಯೊಬ್ಬರೂ ತ್ಯಾಗ ಬಲಿದಾನದ ಹಬ್ಬವಾದ ರಂಜಾನ್ ಆಚರಣೆ ಮಾಡುತ್ತಿದ್ದಾರೆ. ಉಳ್ಳವರು ಇಲ್ಲದವರಿಗೆ ಅನ್ನ, ಬಟ್ಟೆ ಹಾಗೂ ಹಣವನ್ನು ನೀಡುವ ಮೂಲಕ ಉದಾರತೆ ತೋರಬೇಕು. ರಂಜಾನ್ ಹಬ್ಬದ ಪ್ರಯುಕ್ತ ಒಂದು ತಿಂಗಳು ಕೈಗೊಳ್ಳುವ ಉಪವಾಸದಿಂದ ಪ್ರತಿಯೊಬ್ಬರಿಗೂ ಒಳ್ಳೆಯದಾಗುತ್ತದೆ ಎಂದರು.ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ದಾನ ಧರ್ಮ ಮಾಡಿದರು..ಫೆಲಸ್ತೀನ್ ಮತ್ತು ಗಾಜಾ ಮೇಲಿನ ದಾಳಿಯಲ್ಲಿ ಮೃತಪಟ್ಟ ಜನತೆಗೆ ಶಾಂತಿ, ನೆಮ್ಮದಿ ಸಿಗಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 