ರಾಮನವಮಿ : ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಶುಭಾಶಯ
ನವದೆಹಲಿ, ಏ 2, ರಾಮನವಮಿಯ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಜನತೆಗೆ ಶುಭ ಹಾರೈಸಿದ್ದಾರೆ.ರಾಮನವಮಿಯನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ದೆಹಲಿಯ ರಾಮಲೀಲಾ ಮೈದಾನದಲ್ಲಿ ರಾವಣನ ಪ್ರತಿಕೃತಿ ದಹಿಸಿ ದುಷ್ಟಸಂಹಾರದ ವಿಜಯೋತ್ಸವ ಆಚರಿಸಲಾಗುತ್ತಿತ್ತು. ಹಲವೆಡೆ ಜನರು ಒಟ್ಟಾಗಿ ಕೋಸಂಬರಿ, ಪಾನಕ ಹಂಚುತ್ತಿದ್ದರು. ಆದರೆ ಈ ಬಾರಿ ಉತ್ಸವದ ಸಂಭ್ರಮ, ಸಡಗರಕ್ಕೆ ಕೊರೊನಾ ಕಾರ್ಮೋಡ ಅಡ್ಡಿಯಾಗಿದೆ.ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ದೇಶಾದ್ಯಂತ ಲಾಕ್ ಡೌನ್ ವಿಧಿಸಲಾಗಿರುವ ಕಾರಣ ಜನರು ಗುಂಪು ಸೇರುವಂತಿಲ್ಲ. ದೇವಾಲಯಗಳೂ ಬಂದ್ ಆಗಿದ್ದು ಹಬ್ಬದ ಸಡಗರ ಮರೆಯಾಗಿದೆ. ತಮ್ಮ ತಮ್ಮ ಮನೆಗಳಲ್ಲಿಯೇ ಕೋಸಂಬರಿ, ಪಾನಕ ನೈವೇದ್ಯ ಅರ್ಪಿಸಿ ಶ್ರೀರಾಮನನ್ನು ಸ್ಮರಿಸುತ್ತಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾ ನಿರ್ಮೂಲನೆಗೆ ಪ್ರಾರ್ಥಿಸಿ ರಾಮನವಮಿ ಆಚರಿಸುತ್ತಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 