ಯಡಿಯೂರ​ಪ್ಪನವರ ಅಭಿಮಾನೋತ್ಸವ ಸಮಾರಂಭಕ್ಕೆ ರಂಭಾಪುರಿ ಶ್ರೀಗಳಿಗೆ ಆಹ್ವಾನ

ಯಡಿಯೂರ​ಪ್ಪನವರ ಅಭಿಮಾನೋತ್ಸವ ಸಮಾರಂಭಕ್ಕೆ ರಂಭಾಪುರಿ ಶ್ರೀಗಳಿಗೆ ಆಹ್ವಾನ Rambhapuri Sri invited to Yediyurappa's felicitation ceremony

ಲೋಕದರ್ಶನ ವರದಿ 

ಬೆಂಗಳೂರು 04: ನಗರದ ಶ್ರೀ ಮಹಾಂತಿನ ಮಠಕ್ಕೆ ಸೋಮವಾರ ಭೇಟಿ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಶಿಕಾರಿಪುರ ಕ್ಷೇತ್ರದ ಶಾಸಕರಾದ ಬಿ.ವೈ.ವಿಜಯೇಂದ್ರ ಅವರು ಚಿತ್ರದುರ್ಗದಲ್ಲಿ ಜರುಗಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರ​‍್ಪನವರ ಅಭಿಮಾನೋತ್ಸವ ಸಮಾರಂಭಕ್ಕೆ ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳನ್ನು ಆಹ್ವಾನಿಸಿದರು.  

ಈ ಸಂದರ್ಭದಲ್ಲಿ ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಇತರ ಗಣ್ಯರು ಉಪಸ್ಥಿತರಿದ್ದರು.