ರಾಣೇಬೆನ್ನೂರಲ್ಲಿ ಬಂದ್ ವಿಫಲ: ಎಂದಿನಂತೆ ಕಾರ್ಯನಿರ್ವಹಣೆ
ರಾಣೇಬೆನ್ನೂರು14: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವುದೂ ಸೇರಿದಂತೆ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಗುರುವಾರ ಕೆಲ ಸಂಘಟನೆಗಳು ರಾಜ್ಯ ಬಂದ್ಗೆ ಕರೆ ನೀಡಿದ್ದ ಬಂದ್ ರಾಣೇಬೆನ್ನೂರಲ್ಲಿ ಸಂಪೂರ್ಣ ವಿಫಲಗೊಂಡಿತು.
ಬೆಳಿಗ್ಗೆಯಿಂದಲೇ ನಗರದಲ್ಲೆಡೆ ಅಂಗಡಿ ಮುಗ್ಗಟ್ಟುಗಳು, ಹೋಟಲ್ಗಳು ಬಾಗಿಲು ತೆರೆದು ಯತಾಸ್ಥಿತಿ ಕಾರ್ಯನಿರ್ವಹಿಸಿದವು. ನಗರದಲ್ಲಿ ಯಾವುದೇ ಸಂಘಟನೆಗಳು ಪ್ರತಿಭಟನೆ ಕೈಗೊಳ್ಳದೆ ಯಾವುದೇ ಮನವಿ ಸಲ್ಲಿಸುವ ಕಾರ್ಯವನ್ನೂ ಸಹ ಮಾಡದೆ ಇರುವುದು ಕಂಡು ಬಂದಿತು.
ಚಿತ್ರಮಂದಿರ, ಮೆಡಿಕಲ್ ಶಾಪ್, ಸರಕಾರಿ ಮತ್ತು ಖಾಸಗಿ ಆಸ್ಪತ್ರೆ, ಸರಕಾರಿ ವಿವಿಧ ಇಲಾಖೆಗಳು, ಬ್ಯಾಂಕ್ಗಳು, ಸರಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಕೆಸ್ಎಸ್ಆರ್ಟಿ ಬಸ್ಗಳು ಮತ್ತು ಖಾಸಗಿ ವಾಹನಗಳು ಹಾಗೂ ಆಟೋಗಳು ದಿನನಿತ್ಯದಂತೆ ಸಂಚರಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿ ಕಂಡು ಬಂದವು.
ಗ್ರಾಮೀಣ ಭಾಗದ ಜನರು ಸಂತೆ ಮಾರುಕಟ್ಟೆಗಳಿಗೆ ಆಗಮಿಸಿ ತಮ್ಮ ದಿನನಿತ್ಯದ ವಹಿವಾಟು ವ್ಯಾಪಾರಗಳಲ್ಲಿ ತೊಡಗಿದ್ದು ಕಂಡು ಬಂದಿತು. ಒಟ್ಟಿನಲ್ಲಿ ಇಂದು ನೀಡಿದ್ದ ಬಂದ್ ಕರೆಗೆ ನಗರದಲ್ಲಿ ಯಾವುದೇ ಪರಿಣಾಮ ಬೀರದೆ ಬಂದ್ ಸಂಪೂರ್ಣ ವಿಫಲಗೊಂಡಿತು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 