ರಾಣೇಬೆನ್ನೂರಲ್ಲಿ ಬಂದ್ ವಿಫಲ: ಎಂದಿನಂತೆ ಕಾರ್ಯನಿರ್ವಹಣೆ
ರಾಣೇಬೆನ್ನೂರು14: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವುದೂ ಸೇರಿದಂತೆ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಗುರುವಾರ ಕೆಲ ಸಂಘಟನೆಗಳು ರಾಜ್ಯ ಬಂದ್ಗೆ ಕರೆ ನೀಡಿದ್ದ ಬಂದ್ ರಾಣೇಬೆನ್ನೂರಲ್ಲಿ ಸಂಪೂರ್ಣ ವಿಫಲಗೊಂಡಿತು.
ಬೆಳಿಗ್ಗೆಯಿಂದಲೇ ನಗರದಲ್ಲೆಡೆ ಅಂಗಡಿ ಮುಗ್ಗಟ್ಟುಗಳು, ಹೋಟಲ್ಗಳು ಬಾಗಿಲು ತೆರೆದು ಯತಾಸ್ಥಿತಿ ಕಾರ್ಯನಿರ್ವಹಿಸಿದವು. ನಗರದಲ್ಲಿ ಯಾವುದೇ ಸಂಘಟನೆಗಳು ಪ್ರತಿಭಟನೆ ಕೈಗೊಳ್ಳದೆ ಯಾವುದೇ ಮನವಿ ಸಲ್ಲಿಸುವ ಕಾರ್ಯವನ್ನೂ ಸಹ ಮಾಡದೆ ಇರುವುದು ಕಂಡು ಬಂದಿತು.
ಚಿತ್ರಮಂದಿರ, ಮೆಡಿಕಲ್ ಶಾಪ್, ಸರಕಾರಿ ಮತ್ತು ಖಾಸಗಿ ಆಸ್ಪತ್ರೆ, ಸರಕಾರಿ ವಿವಿಧ ಇಲಾಖೆಗಳು, ಬ್ಯಾಂಕ್ಗಳು, ಸರಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಕೆಸ್ಎಸ್ಆರ್ಟಿ ಬಸ್ಗಳು ಮತ್ತು ಖಾಸಗಿ ವಾಹನಗಳು ಹಾಗೂ ಆಟೋಗಳು ದಿನನಿತ್ಯದಂತೆ ಸಂಚರಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿ ಕಂಡು ಬಂದವು.
ಗ್ರಾಮೀಣ ಭಾಗದ ಜನರು ಸಂತೆ ಮಾರುಕಟ್ಟೆಗಳಿಗೆ ಆಗಮಿಸಿ ತಮ್ಮ ದಿನನಿತ್ಯದ ವಹಿವಾಟು ವ್ಯಾಪಾರಗಳಲ್ಲಿ ತೊಡಗಿದ್ದು ಕಂಡು ಬಂದಿತು. ಒಟ್ಟಿನಲ್ಲಿ ಇಂದು ನೀಡಿದ್ದ ಬಂದ್ ಕರೆಗೆ ನಗರದಲ್ಲಿ ಯಾವುದೇ ಪರಿಣಾಮ ಬೀರದೆ ಬಂದ್ ಸಂಪೂರ್ಣ ವಿಫಲಗೊಂಡಿತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 