ರಂಗನಾಥಸ್ವಾಮಿ ಗಂಗೆಸ್ಥಳ ಮೆರವಣಿಗೆ
Ranganathaswamy Gangesthala procession: Kampli News
ಕಂಪ್ಲಿ 20: ತಾಲೂಕಿನ ನಂ.10 ಮುದ್ದಾಪುರ ಗ್ರಾಮದಲ್ಲಿ ಸಾವಿರಾರು ಭಕ್ತರ ಆರಾಧ್ಯ ದೈವ ಶ್ರೀ ರಂಗನಾಥಸ್ವಾಮಿ ಗಂಗೆಸ್ಥಳ ಮೆರವಣಿಗೆ ಹಾಗೂ 25ನೇ ವರ್ಷದ ವಾರ್ಷಿಕೋತ್ಸವ ಸಡಗರ ಸಂಭ್ರಮದಿಂದ ಬುಧವಾರ ನಡೆಯಿತು.
ಇಲ್ಲಿನ ಮುದ್ದಾಪುರ ಗ್ರಾಮದಲ್ಲಿ ನೆಲೆಸಿ, ಪ್ರಾಚೀನ ಕಾಲದ ಇತಿಹಾಸ ಹೊಂದಿದ ರಂಗನಾಥಸ್ವಾಮಿಯನ್ನು ಸಹಸ್ರಾರು ಭಕ್ತರು ದಿನನಿತ್ಯದಲ್ಲಿ ಆರಾಧಿಸುತ್ತಾ ಬಂದಿದ್ದಾರೆ. ಸ್ವಾಮಿಯ ಕೃಪೆಗೆ ಪಾತ್ರರಾದ ಭಕ್ತರು ಇದೇ ಮೊದಲ ಬಾರಿಗೆ ಗಂಗೆಸ್ಥಳ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಮಾಡಿದರು. ಇಲ್ಲಿನ ಗೌರಮ್ಮ ಕೆರೆ ಬಳಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮೆರವಣಿಗೆ ಆರಂಭಿಸಿ, ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಾಗಿ, ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಸಮಾವೇಶಗೊಂಡಿತು. ಇಲ್ಲಿನ ಮೆರವಣಿಗೆಯಲ್ಲಿ ತನುಗೊಡ, ಮಹಿಳೆಯರ ಕಳಸ, ಡೊಳ್ಳು ಕುಣಿತ, ತಾಷಾರಾಂಡೋಲ್ ಸೇರಿದಂತೆ ನಾನಾ ಕಲಾ ಪ್ರಕಾರಗಳು ಮೆರಗು ನೀಡಿದವು. ಇಲ್ಲಿನ ದೇವಸ್ಥಾನದಲ್ಲಿ ಮಹಾಮಂಗಳಾರತಿ ಸೇರಿದಂತೆ ವಿಶೇಷ ಧಾರ್ಮಿಕ ಕೈಂಕಾರ್ಯಗಳು ಶ್ರದ್ಧೆಯಿಂದ ನೆರವೇರಿದವು. ನಂತರ ಭಕ್ತರಿಗೆ ಅನ್ನ ಸಂತಾರೆ್ಣ ನಡೆಸಲಾಯಿತು.
ಈ ಸಂದರ್ಭದಲ್ಲಿ ಯಾದವ ಸಮಾಜದ ಮುಖಂಡರು, ಯುವಕರು, ಮಹಿಳೆಯರು ಸೇರಿದಂತೆ ಸಕಲ ಸದ್ಭಕ್ತರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 